ಬಂಟ್ವಾಳದಲ್ಲಿ ನೃತ್ಯಧಾರ, ಕಲಾನಯನ ಪ್ರಶಸ್ತಿ ಪ್ರದಾನ

ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಬಂಟ್ಚಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಸಂಜೆ ನಡೆಯಿತು.

ಜಾಹೀರಾತು

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ರಸಿಕರತ್ನ ದಿ ನಯನಕುಮಾರ ಸ್ಮರಣಾರ್ಥ ಕಲಾನಯನ ಪ್ರಶಸ್ತಿಯನ್ನು ರಾಜರತ್ನಂ ದೇವಾಡಿಗ ಅವರಿಗೆ ನೀಡಿ  ಗೌರವಿಸಲಾಯಿತು. ದ.ಕ.ಜಿಲ್ಲೆಯ ಪ್ರಮುಖ ನೃತ್ಯ ವಸ್ತ್ರವಿನ್ಯಾಸಕ ಸುನೀಲ್ ಉಚ್ಚಿಲ್ ಮತ್ತು ಸುಜಾತಾ ದಂಪತಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ರಾಜರತ್ನಂ ದೇವಾಡಿಗ, ಇಂದು ಪ್ರಶಸ್ತಿಗಳು ಹಾಗೂ ಡಾಕ್ಟರೇಟ್ ಗಳು ಮಾರಾಟದ ಸರಕಾಗುತ್ತಿರುವ ಹೊತ್ತಿನಲ್ಲಿ ನೈಜವಾಗಿ ದುಡಿಯುವವರಿಗೆ ಸನ್ಮಾನ, ಸತ್ಕಾರಗಳು ಮತ್ತಷ್ಟು ತೊಡಗಿಸಿಕೊಳ್ಳಲು ಪ್ರೇರೇಪಣೆ ನೀಡುತ್ತದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ  ಸುರತ್ಕಲ್ ನ್ಯಾಟ್ಯಾಂಜಲಿ ಕಲಾ ಅಕಾಡೆಮಿಯ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ಚಂದ್ರಶೇಖರ ನಾವಡ ಮಾತನಾಡಿ, ಭರತನಾಟ್ಯ ಸಹಿತ ಭಾರತೀಯ ಕಲಾಪ್ರಕಾರಗಳನ್ನು ತಿಳಿದವರು, ಭಾರತೀಯ ಸಂಸ್ಕೃತಿಯನ್ನೂ ಉಳಿಸಿ ಬೆಳೆಸುತ್ತಾರೆ. ಕಲಾ ಸಂಸ್ಕಾರ ಹೇಳಿಕೊಡುವ ಸಂಸ್ಥೆಗಳು ನಮ್ಮ ಮನಸ್ಸು ಅರಳಿಸುತ್ತವೆ ಮಕ್ಕಳಿಗೆ ಶಾಸ್ತ್ರೀಯ ಕಲೆಗಳನ್ನು ಕಲಿಸಿದರೆ, ಸಂಸ್ಕಾರ ಉಳಿಯುತ್ತದೆ ಎಂದರು.

ಜಾಹೀರಾತು

ಅತಿಥಿಯಾಗಿ ಮಾತ‌ನಾಡಿದ ತುಳುವೆರೆ ಜನಪದ ಕೂಟ ಕೊಡಗು ಜಿಲ್ಲಾ ಖಜಾಂಚಿ ಉದ್ಯಮಿ ಪ್ರಭು ರೈ ಮಾತನಾಡಿ, ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ಕಲಾಪ್ರತಿಭೆ ಗುರುತಿಸುವ ಕೆಲಸ ದೊಡ್ಡ ಸಾಧನೆ ಎಂದರು.

ನೃತ್ಯ ನಿರ್ದೇಶಕಿ ರೋಹಿಣಿ ಉದಯ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಉದಯ ವೆಂಕಟೇಶ ಭಟ್ ಸ್ವಾಗತಿಸಿದರು. ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಪ್ರಭು ಉಪಸ್ಥಿತರಿದ್ದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಕೇಂದ್ರದ ವಿದ್ಯಾರ್ಥಿಗಳಿಂದ ನೃತ್ಯಪ್ರದರ್ಶನ ನಡೆಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ನೃತ್ಯಧಾರ, ಕಲಾನಯನ ಪ್ರಶಸ್ತಿ ಪ್ರದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*