ಬಂಟ್ವಾಳ

ಅಂಗಡಿಗಳಿಗೆ ನುಗ್ಗಿ ಕಳವು ಪ್ರಕರಣ: ಬಂಟ್ವಾಳ ನಗರ ಪೊಲೀಸರಿಂದ ಆರೋಪಿ ಬಂಧನ

ಬಿ.ಸಿ.ರೋಡ್ ಪರಿಸರದಲ್ಲಿ ಹಲವು ಅಂಗಡಿಗಳಿಗೆ ನುಗ್ಗಿ ಕಳವು ಪ್ರಕರಣ ನಡೆಸಿದ ಆರೋಪದಲ್ಲಿ ಮಂಗಳೂರು ಬೆಂಗ್ರೆ ನಿವಾಸಿ ಮಹಮ್ಮದ್ ಆಸಿಫ್ (33) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬರಿ ಕೈಯಲ್ಲಿ ವಾಪಾಸಾಗಿದ್ದ ಬಳಿಕ ಮೂರು ಅಂಗಡಿಗಳಿಗೆ ನುಗ್ಗಿ ಅಂಗಡಿಗಳಿಂದ ಸುಮಾರು 61 ಸಾವಿರ ರೂ ನಗದು ಕಳವು ಮಾಡಿದ್ದ ಕುರಿತು ಆರೋಪಿಸಲಾಗಿತ್ತು. ಇಲ್ಲಿನ ಡಿಶ್ ಟಿ.ವಿ .ರಿಚಾರ್ಜ್ ಅಂಗಡಿಯೊಂದರಲ್ಲಿ ಇಡಲಾಗಿದ್ದ ಸುಮಾರು 52 ಸಾವಿರ ನಗದು, ಹೋಟೆಲ್ 6 ಸಾವಿರ ಹಾಗೂ ಇನ್ನೊಂದು ಅಂಗಡಿಯಿಂದ 3 ಸಾವಿರ ರೂ ನಗದು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಕಳ್ಳ ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಜಾಲಾಡಿವಾಪಸು ಹೋಗಿದ್ದ. ಭಾರಿ ಮಳೆ ಇದ್ದ ಸಂದರ್ಭ, ಬೈಕಿನಲ್ಲಿ ಬಂದು ಅ ಬಳಿಕ ಹೆಲ್ಮಟ್ ಧರಿಸಿ ಅಂಗಡಿಗಳಿಗೆ ನುಗ್ಗಿದ ಬಗ್ಗೆ ಸಿ.ಸಿ‌.ಟಿವಿಯಲ್ಲಿ ಸೆರೆಯಾಗಿತ್ತು. ಸಿ.ಸಿ.ಟಿ.ವಿ.ವಿಡಿಯೋವನ್ನು ಬಳಸಿಕೊಂಡು ಬಂಟ್ವಾಳನಗರ ಠಾಣಾ ಪೋಲೀಸರು ಕಳ್ಳ ನಿಗಾಗಿ ಬಲೆ ಬೀಸಿದ್ದರು

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.