ಬಂಟ್ವಾಳ

ಬಂಟ್ವಾಳದ ‘ಭದ್ರಾ’ ಸಂಸ್ಥೆ ಮಾಲೀಕ ವರದ ಆಚಾರ್ಯ ನಿಧನ

ಬಂಟ್ವಾಳ: ಬಂಟ್ವಾಳದಲ್ಲಿ ಮನೆಮಾತಾಗಿರುವ ಅಡುಗೆ ಅನಿಲ ವಿತರಣಾ ಸಂಸ್ಥೆ ‘ಭದ್ರಾ ಗ್ಯಾಸ್ ಏಜನ್ಸಿ’ ಮಾಲೀಕ ಪಂಡಿತ್ ವರದ ಆಚಾರ್ಯ (90) ಅವರು ಶುಕ್ರವಾರ ಬೆಳಗ್ಗೆ 5.30ಕ್ಕೆ ಬಂಟ್ವಾಳದಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ ರೊಟೇರಿಯನ್ ಮಂಜುನಾಥ ಆಚಾರ್ಯ, ಪುತ್ರಿ ಸಹಿತ ಅಪಾರ ಬಂಧು ಬಾಂಧವರನ್ನು ಅವರು ಹೊಂದಿದ್ದರು. ಅಂತಿಮ ವಿಧಿ ವಿಧಾನಗಳು ಮನೆಯಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಹಲವು ವರ್ಷಗಳಿಂದ ಭದ್ರಾ ಅಡುಗೆ ಅನಿಲ ವಿತರಣಾ ಸಂಸ್ಥೆಯನ್ನು ಸ್ಥಾಪಿಸಿ ಬಂಟ್ವಾಳ ಸುತ್ತಮುತ್ತಲಿನ ಗ್ರಾಹಕರಿಗೆ ಅಡುಗೆ ಅನಿಲ ವಿತರಣೆ ಮಾಡುವುದರಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಬಳಿಕ ಭದ್ರಾ ಗ್ಯಾಸ್ ಏಜನ್ಸಿ ತನ್ನ ಸೇವಾವಧಿಯನ್ನು ವಿಸ್ತರಿಸಿ, ಹೋಂ ಅಪ್ಲೈನ್ಸಸ್, ಫರ್ನೀಚರ್ಸ್ ಮಳಿಗೆಗಳನ್ನು ಸ್ವಂತ ಕಟ್ಟಡದಲ್ಲಿ ಪ್ರಾರಂಭಿಸಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ