ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಪ್ರಯಾಣಿಕ ಮಹಿಳೆ ಹೊರಕ್ಕೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಹೊರವಲಯದ ಜೋಕಟ್ಟೆ ಕ್ರಾಸ್ ಬಳಿ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು 65 ವರ್ಷದ ಈರಮ್ಮ ಎಂದು ಗುರುತಿಸಲಾಗಿದೆ.
ಅವರು ತನ್ನ ಮಗಳೊಂದಿಗೆ ಖಾಸಗಿ ಬಸ್ಸಿನಲ್ಲಿ ಸುರತ್ಕಲ್ ಕಡೆಗೆ ಪ್ರಯಾಣಿಸುತ್ತಿದ್ದರು. ಸೋಮವಾರ ಬೆಳಗ್ಗೆ 10:10 ರ ಸುಮಾರಿಗೆ ಬಸ್ಸು ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್ ತಲುಪಿದಾಗ, ಅದರ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ. ಈ ಪರಿಣಾಮ ಚಾಲಕನ ಪಕ್ಕದ ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ. ಅಲ್ಲದೆ, ಬಸ್ ನ ಹಿಂಭಾಗದ ಎಡ ಚಕ್ರವು ಈರಮ್ಮ ಅವರ ಮೇಲೆ ಚಲಿಸಿದ ಪರಿಣಾಮವಾಗಿ ತಲೆಗೆ ಗಂಭೀರ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಬಾಗಿಲು ಇರಲಿಲ್ಲ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…