ಸರಪಾಡಿ ಬ್ರಹ್ಮಕಲಶೋತ್ಸವ: ವೈಭವದ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಹೊರೆಕಾಣಿಕೆ ಮೆರವಣಿಗೆಯು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಿಂದ ಸರಪಾಡಿಗೆ ಸಾಗಿತು.

ಮೆರವಣಿಗೆಗೆ ಚಾಲನೆ ನೀಡಿದ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶುಭಹಾರೈಸಿದರು.
ಕೇರಳದ ಚೆಂಡೆ, ಬ್ಯಾಂಡ್, ಕೀಲುಕುದುರೆ ಮೊದಲಾದ ಕಲಾತಂಡಗಳು, ಕೊಡೆ ಹಿಡಿದ ಮಹಿಳೆಯರು ಮೆರವಣಿಗೆಗೆ ಮೆರುಗು ನೀಡಿದರು. ಅಕ್ಕಿ, ತೆಂಗಿನಕಾಯಿ, ಸೀಯಾಳ, ದಿನಸಿ ಸಾಮಾಗ್ರಿಗಳು, ತರಕಾರಿಗಳು, ಅಡಿಕೆ, ಬಾಳೆ ಮೊದಲಾದ ಸುವಸ್ತುಗಳನ್ನು ಮೆರವಣಿಗೆಯ ಮೂಲಕ ಕ್ಷೇತ್ರಕ್ಕೆ ಸಾಗಿಸಲಾಯಿತು. ಈ ಸಂದರ್ಭದಲ್ಲಿ ಸರಪಾಡಿ ಯುವಕ ಮಂಡಲ ಪ್ರಾಯೋಜಿತ ಭಕ್ತಿಗೀತೆಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪ್ರಧಾನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹೊಳ್ಳರಗುತ್ತು, ಕಾರ್ಯದರ್ಶಿ ರಾಧಾಕೃಷ್ಣ ರೈ ಕೊಟ್ಟುಂಜ, ಬ್ರಹ್ಮಕಲಶ ಸಮಿತಿ ಸಂಚಾಲಕ ಸಂಜೀವ ಪೂಜಾರಿ ಕಟ್ಟದಡೆ, ಕಾರ್ಯದರ್ಶಿ ಚೇತನ್ ಅಮೀನ್ ಬಜ, ಮೊಕ್ತೇಸರರಾದ ಉಮೇಶ್ ಆಳ್ವ ಕೊಟ್ಟುಂಜ, ವಿಠಲ್ ಎಂ.ಆರುಮುಡಿ, ಚಂದ್ರಶೇಖರ ಶೆಟ್ಟಿ ಎಚ್, ದಯಾನಂದ ಪೂಜಾರಿ ಕೋಡಿ, ಕೊರಗಪ್ಪ ಗೌಡ ಪಠಣ, ಸುರೇಂದ್ರ ಪೈ, ಗಿರಿಧರ್ ನಾಯ್ಕ್ ಮಠದಬೆಟ್ಟು, ದಯಾವತಿ ಎಸ್, ಮುಂಬಯಿ ಸಮಿತಿಯ ಶಶಿಕುಮಾರ್ ಶೆಟ್ಟಿ ಕಲ್ಕೊಟ್ಟೆ, ಆರ್ಥಿಕ ಸಮಿತಿಯ ಸಂತೋಷ್ ಶೆಟ್ಟಿ ಪಿ, ಹೊರೆಕಾಣಿಕೆ ಸಮಿತಿಯ ಸಂಜೀವ ಪೂಜಾರಿ ಬಿ, ಸದಾನಂದ ಡಿ.ಶೆಟ್ಟಿ, ಭುವನೇಶ್ ಪಚ್ಚಿನಡ್ಕ, ಬಿ.ದೇವದಾಸ್ ಶೆಟ್ಟಿ, ರವಿ ಕಕ್ಯಪದವು, ಪುರುಷೋತ್ತಮ ಪೂಜಾರಿ, ವಿವಿಧ ಕ್ಷೇತ್ರದ ಪ್ರಮುಖರಾದ ದೇಜಪ್ಪ ಬಾಚಕೆರೆ, ಬಿ.ಪದ್ಮಶೇಖರ್ ಜೈನ್, ದೇವಪ್ಪ ಪೂಜಾರಿ, ಬೇಬಿ ಕುಂದರ್, ಚಂದ್ರಹಾಸ ಡಿ.ಶೆಟ್ಟಿ, ಸಂಪತ್‌ಕುಮಾರ್ ಶೆಟ್ಟಿ, ವಿಶ್ವನಾಥ್ ಬಿ. ಮೊದಲಾದವರಿದ್ದರು. ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಸರಪಾಡಿ ಅಶೋಕ ಶೆಟ್ಟಿ ಸ್ವಾಗತಿಸಿ, ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಪಾಡಿ ಬ್ರಹ್ಮಕಲಶೋತ್ಸವ: ವೈಭವದ ಹೊರೆಕಾಣಿಕೆ ಮೆರವಣಿಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*