ದೇಶವನ್ನು ರಕ್ಷಿಸುವ ಹಾಗೂ ಸಂವಿಧಾನ ಉಳಿಸಲು ಶ್ರಮಿಸುವ ಅಗತ್ಯವಿದೆ – ಲೇಖಾ ಅಡವಿ

ಭಾರತ ಕಮ್ಯೂನಿಸ್ಟ್‌ ಪಕ್ಷ ( ಮಾರ್ಕ್ಸ್‌ವಾದಿ ,ಲೆನಿನ್ ವಾದಿ ) ಲಿಬರೇಶನ್ ದ.ಕ ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ.
ಧರ್ಮ, ಜಾತಿ, ಮತ- ಪಂಥದ ಆಧಾರದಲ್ಲಿ ಜನರನ್ನು ಒಡೆದಾಳುತ್ತಿರುವ ಪ್ಯಾಶಿಸ್ಟ್ ಶಕ್ತಿಗಳನ್ನು ಸೋಲಿಸಿ. ಕಾರ್ಪೋರೇಟ್ ಲೂಟಿ, ಕೋಮು ದ್ವೇಷ ಮತ್ತು ಸಾಮಾಜಿಕ ಗುಲಾಮಗಿರಿಯ ವಿರುದ್ಧ ಸಂಘರ್ಷ ತೀವ್ರಗೊಳಿಸಿ ಎಂಬ ಪಕ್ಷದ ಕೇಂದ್ರ ಸಮಿತಿ ಯ ಅಭಿಯಾನದ ಅಂಗವಾಗಿ ಬಿ.ಸಿ.ರೋಡಿನಲ್ಲಿ
ವಿದ್ಯಾರ್ಥಿ ,ಯುವಜನರ ಸಮಾವೇಶ ಸಮಾವೇಶ ನಡೆಯಿತು.

ಜಾಹೀರಾತು

ಸಮಾವೇಶವನ್ನು ಉದ್ಘಾಟಿಸಿ‌ ಸಿ.ಪಿ‌.ಐ.ಎಂ.ಎಲ್ ಲಿಬರೇಶನ್ ರಾಜ್ಯ ಸಮಿತಿ ಸದಸ್ಯರು ಹಾಗೂ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ರಾಜ್ಯ ಸಂಚಾಲಕರಾದ ಲೇಖಾ ಅಡವಿಯವರು ಮಾತನಾಡಿ ಇಂದು ಈ ದೇಶದ ಸಂವಿಧಾನ ಅಪಾಯದಲ್ಲಿದ್ದು ಪ್ಯಾಶಿಸ್ಟ್ ಶಕ್ತಿಗಳು ಈ ದೇಶದ ಸಂವಿಧಾನವನ್ನು ನಾಶ ಮಾಡುತ್ತಿದೆ ಎಂದು ಆಪಾದಿಸಿದರು.

ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಸಿ.ಪಿ‌.ಐ‌.ಎಂ.ಎಲ್ ಲಿಬರೇಶನ್ ರಾಜ್ಯ ಸಮಿತಿ ಸದಸ್ಯರು ಹಾಗೂ ಕ್ರಾಂತಿಕಾರಿ ಯುವಜನ ಒಕ್ಕೂಟ (RYA) ರಾಜ್ಯ ಸಂಚಾಲಕರಾದ ಚೆನ್ನಯ್ಯ ರವರು ಮಾತನಾಡಿ ಇಂದು ದೇಶದಲ್ಲಿ ವಿದ್ಯಾರ್ಥಿ ಯುವಜನತೆ ಸಂವಿಧಾನ ವನ್ನು ಅರ್ಥಮಾಡಿಕೊಳ್ಳಬೇಕು ಇಲ್ಲದಿದ್ದಲ್ಲಿ ಪ್ಯಾಶಿಸ್ಟ್ ಶಕ್ತಿ ಗಳು ವಿದ್ಯಾರ್ಥಿ ಯುವಜನತೆಯ ಮೇಲೆ ಧರ್ಮದ ಅಫೀಮನ್ನು ತುಂಬಿ ಅವರನ್ನು ದಾರಿ ತಪ್ಪಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಈ ದೇಶದಲ್ಲಿ ವಿದ್ಯಾರ್ಥಿ ಯುವಜನತೆ ತಮ್ಮ ನಿಜವಾದ ಸಮಸ್ಯೆಗಳನ್ನು ಗುರುತಿಸಿ ಹೋರಾಟವನ್ನು ನಡೆಸಬೇಕು ಎಂದು ಕರೆ ನೀಡಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಮೋಹನ್ ಕೆ.ಇ ಹಾಗೂ ಪ್ರಗತಿಪರ ಚಿಂತಕರಾದ ರಾಜಾ ಚೆಂಡ್ತಿಮಾರ್ ಸಮಾವೇಶವನ್ನದ್ದೇಶಿಸಿ ಮಾತನಾಡಿದರು.
ಪಕ್ಷದ ದ.ಕ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪಕ್ಷದ ಮುಖಂಡರಾದ ತುಳಸೀದಾಸ್ ವಿಟ್ಲ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಮುಖಂಡರಾದ ತಾಬೀಸ್ ಪುತ್ತೂರು ಧನ್ಯವಾದ ಸಲ್ಲಿಸಿದರು.ಸಮಾವೇಶದ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ‌ ಕಾರ್ಯ ಕ್ರಮ ಆರಂಭಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೇಶವನ್ನು ರಕ್ಷಿಸುವ ಹಾಗೂ ಸಂವಿಧಾನ ಉಳಿಸಲು ಶ್ರಮಿಸುವ ಅಗತ್ಯವಿದೆ – ಲೇಖಾ ಅಡವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*