ಬಂಟ್ವಾಳ

ಬಂಟ್ವಾಳ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ:  ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಎಸ್ ಬಿ ಕೂಡಲಗಿ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಸೋಮವಾರ ಶಾಲು , ಸ್ಮರಣಿಕೆ ನೀಡಿ ಗೌರವಿಸಲಾಯಿತು‌.‌

ಜಾಹೀರಾತು

ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ  ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹೊಸತನ್ನು ಕಲಿಯುವ ಛಲ ಮತ್ತು ಧೈರ್ಯ ಇದ್ದರೆ ಯಾವುದೇ ಕರ್ತವ್ಯವನ್ನಾದರೂ ಸುಲಭವಾಗಿ ನಿರ್ವಹಿಸಬಹುದು. ತಾಲೂಕು ಆಡಳಿತದ ಯಶಸ್ಸಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರು ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಅತ್ಯುತ್ತಮವಾದ ಸಹಕಾರ ನೀಡಿದ್ದರಿಂದಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಶೀಲ್ದಾರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ  ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ಧನ ಜೆ,  ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts