ಬಂಟ್ವಾಳ

ವಾಟ್ಸಾಪ್ ಮೂಲಕ ಷೇರ್ ಟ್ರೇಡಿಂಗ್: ಲಕ್ಷಾಂತರ ರೂ ವಂಚಿಸಿದ ಅಪರಿಚಿತರು

ಷೇರ್ ಟ್ರೇಡಿಂಗ್ ಗೆ ಹಣ ಹೂಡಿಕೆ ಮಾಡಿ ಲಾಭ ಗಳಿಸುವಂತೆ ಅಪರಿಚಿತರು ವಾಟ್ಸಾಪ್ ಮೂಲಕ ಕಳಿಸಿದ ಸಂದೇಶವನ್ನು ನಂಬಿದ ಬಿ.ಮೂಡ ಗ್ರಾಮದ ಜೋಡುಮಾರ್ಗ ನಿವಾಸಿ ಸುಬ್ರಾಯ ರಾಮ ಮಡಿವಾಳ (74) ಎಂಬವರು 18.92 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ವಾಟ್ಸಾಪ್ ನಲ್ಲಿ ಸಂದೇಶವೊಂದು ಬಂದು ಷೇರ್ ಟ್ರೇಡಿಂಗ್ ಗೆ ಹಣ ಹೂಡುವಂತೆ ಕೋರಿದ್ದರು. ಈ ಅಪರಿಚಿತ ಆರೋಪಿಗಳು ನೀಡಿದ ಸೂಚನೆಗಳನ್ನು ನಂಬಿ ಅವುಗಳನ್ನು ಅನುಸರಿಸಿ, ಕಳೆದ ನವೆಂಬರ್ ತಿಂಗಳಿಂದ ಈ ಜನವರಿ 9ನೇ ತಾರೀಕಿನವರೆಗೆ ಹಂತ ಹಂತವಾಗಿ ಆರೋಪಿಗಳು ತಿಳಿಸಿದ ನಾನಾ ಬ್ಯಾಂಕ್ ಖಾತೆಗಳಿಗೆ ಅವರು 18,92,200 ರೂಗಳನ್ನು ಪಾವತಿಸಿದ್ದಾರೆ. ಇಷ್ಟಾದರೂ ಆರೋಪಿಗಳು ಯಾವುದೇ ಲಾಭಾಂಶ  ನೀಡದೆ, ಪಾವತಿಸಿದ ಹಣವನ್ನೂ ನೀಡದೆ ವಂಚಿಸಿದ್ದಾರೆ ಎಂದು ನಗರ ಠಾಣೆಗೆ ದೂರು ನೀಡಿರುವ ಸುಬ್ರಾಯ ರಾಮ ಮಡಿವಾಳ ಅವರು, ಈ ಕುರಿತು ತನಿಖೆ ನಡೆಸಿ, ನ್ಯಾಯ ದೊರಕಿಸಿಕೊಂಡುವಂತೆ ಮನವಿ ಮಾಡಿದ್ದಾರೆ. ಅದರಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ