ಪ್ರಮುಖ ಸುದ್ದಿಗಳು

ಕೆಯುಡಬ್ಲ್ಯುಜೆ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

ಜಾಹೀರಾತು

ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು
ವಿನಂತಿಸಿದ್ದಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts