ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ

ಆದರ್ಶಗಳನ್ನು ಇಟ್ಟುಕೊಂಡು ಮುಂದು ಹೋದರೆ ಜೀವನದಲ್ಲಿ ಸುಖ ಶಾಂತಿ ಸಿಗುತ್ತದೆ. ಯಾವುದೋ ಸಿನಿಮಾ ಹಾಡುಗಳಿಗೆ ಮಕ್ಕಳು ರೀಲ್ಸ್ ಮಾಡುವ ಬದಲು ತ್ರಿಪದಿಗಳನ್ನು ಹೇಳುವ ರೀಲ್ಸ್ ಮಾಡಿದರೆ ಅದು ಪ್ರಯೋಜನಕಾರಿಯಾಗುತ್ತದೆ ಈ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಹೇಳಿದರು.

ಜಾಹೀರಾತು

ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ತಾಲೂಕು ಕಚೇರಿ ಸಹಯೋಗದೊಂದಿಗೆ ಬಿ.ಸಿ.ರೋಡಿನ ಆಡಳಿತ ಸೌಧದದ ಸಭಾಂಗಣದಲ್ಲಿ ನಡೆದ ಸರ್ವಜ್ಞ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು ಉಪನ್ಯಾಸ ನೀಡಿ ಕವಿ ಸರ್ವಜ್ಞ ತನ್ನ ತ್ರಿಪದಿಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿಳಿಸುವ ಕಾರ್ಯವನ್ನು ಮಾಡಿದ್ದಾರೆ.  ಅವರಿಂದ ಸಾವಿರಕ್ಕಿಂತಲೂ ಅಧಿಕ ತ್ರಿಪದಿಗಳು ರಚನೆಯಾಗಿದ್ದು  ಸಾರ್ವಕಾಲಿಕ ಸತ್ಯವನ್ನು ತಿಳಿಸುತ್ತದೆ ಎಂದರು.

ಜಾಹೀರಾತು

ಬಂಟ್ವಾಳ ತಾಲೂಕು ಹಿರಿಯ ನಾಗರಿಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ರಾಜ್ಯ ಕುಲಾಲ ಕುಂಬಾರರ ಮಹಿಳಾ ಘಟಕದ ಅಧ್ಯಕ್ಷೆ ನಳಿನಿ ಮಹಾಬಲ, ಯುವ ವೇದಿಕೆಯ ಅಧ್ಯಕ್ಷ ನಿತೀಶ್ ಪಲ್ಲಿಕಂಡ, ಯುವ ವೇದಿಕೆ ಮಹಿಳಾ ಸಮಿತಿ ಅಧ್ಯಕ್ಷೆ ವಿಜಯಶ್ರೀ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪುಷ್ಪಲತಾ ಪ್ರಮುಖರಾದ ಎಚ್ಕೆ ನಯನಾಡು,  ದೇವಪ್ಪ ಕುಲಾಲ್  ಪಂಜಿಕಲ್ಲು, ಲಕ್ಷ್ಮಣ್ ಅಗ್ರಬೈಲು, ವಿಠಲ ಪಲ್ಲಿಕಂಡ, ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ದಿವಾಕರ ಮುಗುಳ್ಯ, ಕದಾಯ ನಿರೀಕ್ಷಕ  ವಿಜಯ ಆರ್. ಜನಾರ್ದನ ಜೆ., ರಾಷ್ಟ್ರೀಯ ಹಬ್ಬಗಳ ಆಚರಣ ಸಮಿಯ ವಿಷಯ ನಿರ್ವಾಹಕ  ವಿಷು ಕುಮಾರ್ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.ಶ್ರೀಕಲಾ ಕಾರಂತ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*