ಕಥೊಲಿಕ್ ಸಭಾ ವಿಟ್ಲ ವಲಯದ ದಶಮಾನೋತ್ಸವ ಸಂಭ್ರಮಾಚರಣೆ

ಕ್ರಿಸ್ತನ ಮೌಲ್ಯಗಳು ಇದ್ದರೆ ಮಾತ್ರ ಕಥೊಲಿಕ್ ಸಭಾ ಪವಿತ್ರವಾಗುತ್ತದೆ – ಅತೀ ವಂದನೀಯ ಡಾ. ಜೆ.ಬಿ.ಸಲ್ಡಾನ್ಹಾ

ಜಾಹೀರಾತು

ಮಂಗಳೂರು ಧರ್ಮಕ್ಷೇತ್ರದ ಸೈಂಟ್ ಜೋನ್ ಪಾವ್ಲ್ ದ್ವಿತೀಯ ವಿಟ್ಲ ವಲಯದ ಕಥೊಲಿಕ್ ಸಭಾ ಇದರ ದಶಮಾನೋತ್ಸವದ ಸಂಭ್ರಮಾಚರಣೆಯು ಫೆಬ್ರವರಿ 18 ರಂದು ಸೈಂಟ್ ಜೋಸೆಫ್ ಚರ್ಚ್ ಸೂರಿಕುಮೇರು ಬೊರಿಮಾರ್ ಇಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು .

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ಅತೀ ವಂದನೀಯ ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ, ವಿಟ್ಲ ವಲಯದ ಶ್ರೇಷ್ಠ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್, ವಲಯದ ಚರ್ಚ್ ಗಳ ಧರ್ಮಗುರುಗಳು ಹಾಗೂ ಕಥೊಲಿಕ್ ಸಭಾ ವಿಟ್ಲ ವಲಯದ ಮುಖ್ಯಸ್ಥರೊಂದಿಗೆ ಕಳೆದ ಹತ್ತು ವರ್ಷಗಳಲ್ಲಿ ಕಥೊಲಿಕ್ ಸಭಾ ಮುಖಾಂತರ ನಡೆದ ಎಲ್ಲಾ ಕಾರ್ಯಗಳಿಗೆ ದೇವರು ನೀಡಿದ ಆಶೀರ್ವಾದಗಳಿಗೆ ಕೃತಜ್ಞತಾ ಪೂರ್ವಕವಾಗಿ ದಿವ್ಯ ಬಲಿಪೂಜೆಯನ್ನು ನಡೆಸುವ ಮುಖಾಂತರ ದಶಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಲಿಪೂಜೆಯ ಬಳಿಕ ಸೂರಿಕುಮೇರು ಬೊರಿಮಾರ್ ಚರ್ಚ್ ವಠಾರದಲ್ಲಿ ಭವ್ಯ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾದ ಅತೀ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರು ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೇವೆಯ ಮನೋಭಾವ ಹಾಗೂ ತ್ಯಾಗದ ಉತ್ಸಾಹ ಮತ್ತು ಕ್ರಿಸ್ತನ ಮೌಲ್ಯಗಳು ನಮ್ಮಲ್ಲಿ ಇದ್ದರೆ ಮಾತ್ರ ಕಥೊಲಿಕ್ ಸಭಾ ಪವಿತ್ರವಾಗುತ್ತದೆ. ಮುಂದಿನ ದಿನಗಳಲ್ಲಿ ಬಲಿಷ್ಟವಾದ ಒಗ್ಗಟ್ಟು ಮತ್ತು ಒಮ್ಮನಸ್ಸಿನಿಂದ ಸೇವೆಯನ್ನು ನೀಡಲು ಕರೆ ನೀಡಿದರು. ಕಳೆದ ಹತ್ತು ವರ್ಷಗಳಲ್ಲಿ ವಿಟ್ಲ ವಲಯದಲ್ಲಿ ಕಥೊಲಿಕ್ ಸಭಾ ಸಂಘಟನೆಯ ಮುಖಾಂತರ ವಲಯ ಹಾಗೂ ಘಟಕದಲ್ಲಿ ನಿಷ್ಠಾವಂತ ಸೇವೆಯನ್ನು ನೀಡಿದ ಆಧ್ಯಾ ತ್ಮಿಕ ನಿರ್ದೇಶಕರು, ಅಧ್ಯಕ್ಷ ಹಾಗೂ ಕಾರ್ಯದರ್ಶಿ, ಕೇಂದ್ರೀಯ ಪ್ರತಿನಿಧಿಗಳು ಮತ್ತು ಕಥೊಲಿಕ್ ಸಭಾದ ಮುಖ್ಯಸ್ಥರನ್ನು ಅಭಿನಂದಿಸಿ ಸನ್ಮಾನಿಸಿದರು. ವಲಯದ ಶ್ರೇಷ್ಠ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ಇವರು ಕಥೊಲಿಕ್ ಸಭಾದಲ್ಲಿ ಸೇವೆಯನ್ನು ಸಲ್ಲಿಸಿದವರಿಗೆ ಅವರನ್ನು ಕೃತಜ್ಞತೆಯನ್ನು ಅರ್ಪಿಸಿ,ಮುಂದಿನ ದಿನಗಳಲ್ಲಿ ಹೇಗೆ ಸೇವೆಯನ್ನು ನೀಡಬೇಕು ಎಂಬ ವಿಷಯದ ಬಗ್ಗೆ ಮಾತನಾಡಿದರು.

ಗೌರವ ಅತಿಥಿಗಳಾಗಿ ಆಗಮಿಸಿದ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಸನ್ಮಾನವನ್ನು ಸ್ವೀಕರಿಸಿ ಕಳೆದ ಹತ್ತು ವರ್ಷಗಳಲ್ಲಿ ಕಥೊಲಿಕ್ ಸಭಾ ವಿಟ್ಲ ವಲಯದ ಅಭಿವೃದ್ಧಿಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಥೊಲಿಕ್ ಸಭಾ ಸಂಘಟನೆಯು ಮಂಗಳೂರು ಧರ್ಮಕ್ಷೇತ್ರದಲ್ಲಿ ಧರ್ಮಾಧ್ಯಕ್ಷರ ಮಾರ್ಗದರ್ಶನದಲ್ಲಿ ನಡೆಯುವ ಅತೀ ದೊಡ್ಡ ಸಂಘಟನೆ. ಈ ಸಂಘಟನೆಯು ಹಲವಾರು ಒಳ್ಳೆಯ ಕಾರ್ಯಕ್ರಮಗಳನ್ನು ಮಾಡಿ ಜನರ ಮನಸ್ಸುಗಳನ್ನು ಗೆದ್ದು ಜಗತ್ ಪ್ರಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಳ್ಳೆಯ ಕಾರ್ಯಕ್ರಮಗಳು ನಡೆಯಲಿ ಎಂದು ಸೂರಿಕುಮೇರು ಚರ್ಚ್ ನ ಧರ್ಮಗುರು ವಂದನೀಯ ಗ್ರೆಗರಿ ಪಿರೇರಾರವರು ದಶಮಾನೋತ್ಸವಕ್ಕೆ ಶುಭ ಹಾರೈಸಿದರು. ವಿಟ್ಲ ವಲಯದ ಅಧ್ಯಕ್ಷ ಆಂಟನಿ ಡಿಸೋಜ ಎಲ್ಲರನ್ನೂ ಸ್ವಾಗತಿಸಿ, ಕಾರ್ಯದರ್ಶಿ ರೋಷನ್ ಬೊನಿಫಾಸ್ ಮಾರ್ಟಿಸ್ ವಂದಿಸಿ, ವಿಟ್ಲ ಘಟಕದ ಸದಸ್ಯ ಮನೋಹರ್ ಲ್ಯಾನ್ಸಿ ಕಾರ್ಯಕ್ರಮವನ್ನು ನಿರೂಪಿಸಿದರು. ವೇದಿಕೆಯಲ್ಲಿ ವಿಟ್ಲ ವಲಯದ ಸ್ಥಾಪಕ ಅಧ್ಯಕ್ಷ ರೋಬರ್ಟ್ ಮಸ್ಕರೇನ್ಹಸ್, ನಿಕಟ ಪೂರ್ವ ಅಧ್ಯಕ್ಷ ಲೂವಿಸ್ ಮಸ್ಕರೇನ್ಹಸ್, ಸೂರಿಕುಮೇರು ಘಟಕದ ಅಧ್ಯಕ್ಷ ತೊಮಸ್ ಲಸ್ರಾದೊ, ಚರ್ಚ್ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್, ವಲಯದ ಮಾಜಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯದ ಘಟಕಗಳ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಮುಖ್ಯಸ್ಥರು ಹಾಜರಿದ್ದರು. ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಥೊಲಿಕ್ ಸಭಾ ವಿಟ್ಲ ವಲಯದ ದಶಮಾನೋತ್ಸವ ಸಂಭ್ರಮಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*