ಬೇಸಗೆ ಬಿಸಿಯೇರುವ ಹೊತ್ತಿಗೆ ನೀರಿಗೂ ತತ್ವಾರವಾಗದಂತೆ ನೀರನ್ನು ಮಿತವಾಗಿ ಬಳಸಲು ಸೂಚನೆ

ಮಂಗಳೂರು ನಗರ ಸೇರಿದಂತೆ ಗ್ರಾಮಾಂತರ ಭಾಗಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಂ ಒಳಹರಿವು ಇನ್ನೇನು ಬಹುತೇಕ ಸ್ಥಗಿತಗೊಳ್ಳುವ ಆತಂಕ ಇರುವ ಕಾರಣ, ಹರೇಕಳ ಎಂಬಲ್ಲಿ ನಿರ್ಮಿಸಲಾದ ಡ್ಯಾಂನಲ್ಲಿ ನೀರು ಸಂಗ್ರಹಿದ್ದನ್ನು ತುಂಬೆ ಡ್ಯಾಂಗೆ ಪಂಪಿಂಗ್ ಮಾಡಲು ತೀರ್ಮಾನಿಸಲಾಗಿದೆ.

ಮಂಗಳೂರು ನಗರಕ್ಕೆ ಈ ವರ್ಷದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆಯಾಗುವುದನ್ನು ತಡೆಯುವ ಉದ್ದೇಶದಿಂದ ಆಯುಕ್ತರ ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ತುಂಬೆ ಅಣೆಕಟ್ಟಿನ ಕೆಳಭಾಗದಿಂದ ನೀರನ್ನು ಡ್ಯಾಮ್ ಗೆ ಪಂಪ್ ಮಾಡಲು ಹೆಚ್ಚುವರಿಯಾಗಿ ಪಂಪ್ ಗಳನ್ನು ಅಳವಡಿಸುತ್ತಿರುವುದನ್ನು ಆಯುಕ್ತರು ಪರಿವೀಕ್ಷಿಸಿದರು, ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತುರ್ತು ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಲು ಸೂಚಿಸಿದರು

ಬಂಟ್ವಾಳ, ಸರಪಾಡಿ ಭಾಗದಿಂದ ತುಂಬೆ ಡ್ಯಾಂಗೆ ಒಳಹರಿವು ಸ್ಥಗಿತಗೊಂಡ ಕಾರಣ, ಡ್ಯಾಂನ ಗೇಟ್ ಗಳನ್ನು ಹಾಕಲಾಗಿದೆ. ಇನ್ನೊಂದೆಡೆ ಬಿಸಿಲ ಕಾವು ಏರುತ್ತಿದ್ದು, ನದಿಯಲ್ಲೂ ನೀರಿನ ಪ್ರಮಾಣ ಕುಸಿತವಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರಕ್ಕೆ ನೀರು ಸಮರ್ಪಕವಾಗಿ ನಿರ್ವಹಣೆ ಮಾಡುವ ಉದ್ದೇಶದಿಂದ ಮುಂದಿನ ವಾರದಿಂದಲೇ ಹರೇಕಳ ಡ್ಯಾಂ ಕಡೆಯಿಂದ ಪಂಪ್ ಮೂಲಕ ನೀರೆತ್ತುವ ಚಿಂತನೆ ಮಾಡಲಾಗುತ್ತಿದ್ದು, ಇದಕ್ಕಾಗಿ ಪಂಪ್ ಅಳವಡಿಕೆ ಕಾರ್ಯ ನಡೆಯುತ್ತಿದೆ. 2023ರಲ್ಲಿ ನೀರಿನ ಅಭಾವ ಎದುರಾಗಿದ್ದ ಸಂದರ್ಭ 13 ಪಂಪ್ ಬಳಕೆ ಮಾಡಿ, ತುಂಬೆ ಡ್ಯಾಂನ ಕೆಳಭಾಗದ ಹರೇಕಳ ಡ್ಯಾಂನಲ್ಲಿ ಸಂಗ್ರಹವಾದ ನೀರನ್ನು ಮೇಲೆತ್ತಲಾಗುತ್ತಿತ್ತು. ಈ ಮಧ್ಯೆ ಎರಡು ದಿನಕ್ಕೊಮ್ಮೆ ರೇಶನಿಂಗ್ ಮಾಡಿ ಮಂಗಳೂರಿನ ನೀರಿನ ಬವಣೆ ನೀಗಿಸುವ ಪ್ರಯತ್ನ ಮಾಡಲಾಗಿತ್ತು. ಅದೇ ಮಾದರಿಯನ್ನು ಈ ಬಾರಿಯೂ ಮಾಡುವ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆಯುತ್ತಿದ್ದು, ಯಾವಾಗ ರೇಶನಿಂಗ್ ಆರಂಭಗೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ. 

ಜಾಹೀರಾತು

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬೇಸಗೆ ಬಿಸಿಯೇರುವ ಹೊತ್ತಿಗೆ ನೀರಿಗೂ ತತ್ವಾರವಾಗದಂತೆ ನೀರನ್ನು ಮಿತವಾಗಿ ಬಳಸಲು ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*