ಜೇಸಿ ಜೋಡುಮಾರ್ಗ ನೇತ್ರಾವತಿಯಿಂದ ಸನ್ಮಾನ, ತರಬೇತಿ ಕಾರ್ಯಕ್ರಮ

 

ಜಾಹೀರಾತು

ಜೇಸಿ ಜೋಡುಮಾರ್ಗ ನೇತ್ರಾವತಿಯಿಂದ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ತರಬೇತಿ, ಆರೋಗ್ಯ ಮಾಹಿತಿ ಹಾಗೂ ಸನ್ಮಾನ ಕಾರ್ಯಕ್ರಮಗಳು ನಡೆದವು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸುಬ್ರಹ್ಮಣ್ಯ ಪೈ ವಹಿಸಿದ್ದರು. ವಲಯ ಉಪಾಧ್ಯಕ್ಷ ಸನತ್ ಕುಮಾರ್ ನಾಯ್ಕ್ ಅವರು ಘಟಕಾಭಿವೃದ್ಧಿ ಮತ್ತು ನಿರ್ವಹಣೆಯ ಕುರಿತು ತರಬೇತಿಯನ್ನು ನಡೆಸಿಕೊಟ್ಟರು.ಜೇಸಿಯ ಘಟಕದ ನಿರ್ವಹಣೆ ಸಂದರ್ಭ ಎದುರಾಗುವ ಸವಾಲುಗಳು ಹಾಗೂ ಸದಸ್ಯರು ಅದನ್ನು ಸದುಪಯೋಗಪಡಿಸಿಕೊಳ್ಳುವ ವಿಚಾರವಾಗಿ ಅವರು ಮಾಹಿತಿ ನೀಡಿದರು. ಮಹಿಳಾ ದಿನಾಚರಣೆ ಅಂಗವಾಗಿ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಡಾ. ವಿದ್ಯಾಲಕ್ಷ್ಮಿ ವಿ ಶೆಟ್ಟಿ ನಡೆಸಿಕೊಟ್ಟರು. ಮೆಸ್ಕಾಂ, ಬಿ.ಸಿ.ರೋಡ್ ನಲ್ಲಿ ಮೆಕ್ಯಾನಿಕ್ ಆಗಿ ಹಲವು ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿರುವ ಮಹಮ್ಮದ್ ಅವರಿಗೆ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.

ನಿಕಟಪೂರ್ವಾಧ್ಯಕ್ಷೆ ಗಾಯತ್ರಿ ಲೋಕೇಶ್ ಶುಭ ಹಾರೈಸಿದರು. ಉಪಾಧ್ಯಕ್ಷರಾದ ಜೀವನ್ ಕುಲಾಲ್, ಜತೆ ಕಾರ್ಯದರ್ಶಿ ದೀಪ್ತಿ ಶ್ರೀನಿಧಿ, ಕೋಶಾಧಿಕಾರಿ ಡಾ. ವಿನಾಯಕ ಕೆ.ಎಸ್, ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಸಂಯೋಜಕಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ನಿರ್ದೇಶಕರಾದ ಹರಿಶ್ಚಂದ್ರ ಆಳ್ವ, ಪೂರ್ವಾಧ್ಯಕ್ಷರಾದ ರಾಮಚಂದ್ರ ರಾವ್, ಪಿ.ಎ.ರಹೀಂ, ಪಿ.ಮುಹಮ್ಮದ್, ಹರಿಪ್ರಸಾದ್ ಕುಲಾಲ್, ಶ್ರೀನಿಧಿ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ಧೀರಜ್ ಹೆಬ್ರಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೇಸಿ ಜೋಡುಮಾರ್ಗ ನೇತ್ರಾವತಿಯಿಂದ ಸನ್ಮಾನ, ತರಬೇತಿ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*