ವಿಟ್ಲ

ನೈಸರ್ಗಿಕ ಕೃಷಿ ಕುರಿತು ರೈತರಿಗೆ ತರಬೇತಿ

https://www.bantwalnews.com

ಜಾಹೀರಾತು

ವಿಟ್ಲ: ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಬಂಟ್ವಾಳ ತಾಲೂಕಿನ ಮೂಡಂಬೈಲಿನಲ್ಲಿ ನೈಸರ್ಗಿಕ ಕೃಷಿ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಸರೋಲಿಮೂಲೆ ಕೃಷ್ಣ ನಾಯ್ಕ ಮನೆಯ ವಠಾರದಲ್ಲಿ ಆಯೋಜಿಸಲಾಗಿತು.

ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿಗಳಾದ ಡಾ. ಹರೀಶ್ ಶೆಣೈ ಅವರು ನೈಸರ್ಗಿಕ ಕೃಷಿ ಮಹತ್ವ, ತತ್ವಗಳು ಹಾಗೂ ಅದರ ಪ್ರಾಮುಖ್ಯತೆ ಕುರಿತು ಮಾಹಿತಿ ನೀಡಿ ನೈಸರ್ಗಿಕ ಕೃಷಿಯ ಮೂಲ ತತ್ವಗಳಲ್ಲಿ ಒಂದಾಗಿರುವ ಜೀವಾಮೃತ ತಯಾರಿಸಲು ಬೇಕಾದ ಪರಿಕರಗಳಾದ ಸೆಗಣಿ, ಗಂಜಲ, ಬೆಲ್ಲ, ದ್ವಿದಳಧಾನ್ಯದ ಹಿಟ್ಟು ಹಾಗೂ ತೋಟದ ಮಣ್ಣು ಇವುಗಳನ್ನು ಬಳಸಿ ಜೀವಾಮೃತ ತಯಾರಿಸುವ ಕುರಿತು ಪದ್ದತಿ ಪ್ರಾತ್ಯಕ್ಷಿಕೆ ಮುಖಾಂತರ ತರಬೇತಿಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರ  ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಟಿ. ಜೆ. ರಮೇಶ ಹಾಗೂ ತಾಂತ್ರಿಕ ಅಧಿಕಾರಿಯಾದ ಸತೀಶ್ ನಾಯ್ಕ ಇವರು ಭಾಗವಹಿಸಿದರು. ಪ್ರಗತಿಪರ ಕೃಷಿಕ ಕೃಷ ನಾಯ್ಕ್ ಹಾಗೂ ಗ್ರಾಮದ ಸುಮಾರು 15 ಜನ ರೈತ ಭಾಂದವರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ