ಬಂಟ್ವಾಳ

ಭಯಂಕೇಶ್ವರ ದೇವಸ್ಥಾನ 5ರಂದು ಹೊರೆಕಾಣಿಕೆ, 8ರಂದು ಬ್ರಹ್ಮಕಲಶಾಭಿಷೇಕ, 12ರವರೆಗೆ ಜಾತ್ರೋತ್ಸವ

ಬಂಟ್ವಾಳ: ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಶ್ರೀಗಣಪತಿ, ಶ್ರೀ ದುರ್ಗಾ ಸಾನಿಧ್ಯಗಳ ಪುನಃಪ್ರತಿಷ್ಠೆಯೊಂದಿಗೆ ಭಯಂಕೇಶ್ವರ ಸದಾಶಿವ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ಮಾ.3ರಿಂದ ಮೊದಲ್ಗೊಂಡು ಮಾ.12ರವರೆಗೆ ನಡೆಯಲಿದೆ ಎಂದು ವ್ಯವಸ್ಥಾಪನಾ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ ಹೇಳಿದ್ದಾರೆ.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಮಾ.5ರಂದು  ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ದೊಂಪದಬಲಿ ಶ್ರೀ ನಾಲ್ಕೈತ್ತಾಯ ದೈವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಮಧ್ಯಾಹ್ನ 2.30ಕ್ಕೆ ಆರಂಭಗೊಳ್ಳುತ್ತದೆ ಎಂದರು. ಮಾ.7ರಂದು ಬಿಂಬಪ್ರತಿಷ್ಠೆ, ಮಾ.8ರಂದು ಬೆಳಗ್ಗೆ ಬ್ರಹ್ಮಕಲಶಾಬಿಷೇಕ ನಡೆಯುವುದು. ಬಳಿಕ ಜಾತ್ರೋತ್ಸವಗಳು ಆರಂಭಗೊಂಡು, ಮಾ.12ರವರೆಗೆ ನಡೆಯಲಿದೆ. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನೃತ್ಯಭಜನೆಯೂ ಇರಲಿದೆ ಎಂದರು.

ನೇತ್ರಾವತಿ ನದಿಯಿಂದ ಜಲವನ್ನು ತಂದು ಶ್ರೀ ಭಯಂಕೇಶ್ವರ ಸದಾಶಿವ ದೇವರಿಗೆ ಭಕ್ತರ ಸಮ್ಮುಖದಲ್ಲಿ ಅಭಿಷೇಕವನ್ನು ಮಾಡಲಾಯಿತು

ಮಾ.5ರಂದು ನರಿಕೊಂಬು ಗ್ರಾಮದ  ಗುತ್ತಿನ ನಾಲ್ಕು ಮನೆಯವರಿಂದ ದೀಪ ಪ್ರಜ್ವಲನೆಯೊಂದಿಗೆ ಉಗ್ರಾಣ ಮುಹೂರ್ತ ನೆರವೇರಲಿದೆ, ಬಳಿಕ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದೀಪ ಪ್ರಜ್ವಲನೆಯೊಂದಿಗೆ ಹೊರೆಕಾಣಿಕೆ ಮೆರವಣಿಗೆ ದೊಂಪದಬಳಿಯ ನಾಲ್ಕೈತ್ತಾಯ ದೈವಸ್ಥಾನದಿಂದ ಆರಂಭಗೊಂಡು, ಮೊಗರ್ನಾಡಿನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ, ಕುರ್ಚಿಪಲ್ಲ, ಸತ್ಯದೇವತೆ ಕಲ್ಲುರ್ಟಿ ದೇವಸ್ಥಾನ, ಪಾಣೆಮಂಗಳೂರು ವೀರವಿಠಲ ದೇವಸ್ಥಾನದತ್ತ ಸಾಗಿ ಶ್ರೀ ಭಯಂಕೇಶ್ವರ ದೇವಸ್ಥಾನ ತಲುಪಲಿದೆ ಎಂದರು.

ಜಾತ್ರೋತ್ಸವದ ಪ್ರತಿದಿನವೂ ಮಧ್ಯಾಹ್ನ ರಾತ್ರಿ ಊಟೋಪಚಾರ ಸಹಿತ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಪ್ರತಿದಿನ ಭಗವದ್ಗೀತಾ ಪ್ರವಚನವೂ ಇರಲಿದೆ ಎಂದರು.  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಡಾ. ಎಂ.ಮೋಹನ ಆಳ್ವ, ಅಧ್ಯಕ್ಷರಾಗಿ ಜಗನ್ನಾಥ ಬಂಗೇರ, ಕಾರ್ಯಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇತೃತ್ವದಲ್ಲಿ ವಿವಿಧ ಸಮಿತಿ ಕಾರ್ಯಾಚರಿಸುತ್ತಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮಾಹಿತಿ ನೀಡಿದರು. ಪ್ರಮುಖರಾದ ಪ್ರಕಾಶ್ ಕಾರಂತ ನರಿಕೊಂಬು, ರಘು ಸಫಲ್ಯ, ಲೋಕೇಶ್ ಕೆ ನರಹರಿನಗರ, ಪದ್ಮನಾಭ ಮಯ್ಯ ಏಲಬೆ, ಬಿ.ರಾಮಚಂದ್ರ ರಾವ್, ಭುವನೇಶ್, ಚಂದ್ರಾವತಿ ರತ್ನಾಕರ ನಾಯ್ಕ್, ಗೋವಿಂದ ಪೈ, ಪುರುಷೋತ್ತಮ ಸಾಲಿಯಾನ ನರಿಕೊಂಬು, ಪ್ರೇಮನಾಥ ಶೆಟ್ಟಿ ಅಂತರ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.