ಬಡವರಿಗೆ ಸರಕಾರ ನೀಡುವ ಪಡಿತರ ಅಕ್ಕಿಯನ್ನು ಗೋಡೌನ್ ನಿಂದ ಕಳವು ಮಾಡಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣಾ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಜಯ್ ಮತ್ತು ರಝಾಕ್ ಅವರನ್ನು ಪೋಲೀಸರು ಬಂಧಿಸಲಾಗಿದ್ದು, ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ಬಂಟ್ವಾಳದ ತಲಪಾಡಿಯಲ್ಲಿ ಗೋಡೌನಲ್ಲಿ ಇರಿಸಲಾಗಿದ್ದ, ಕೋಟ್ಯಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನು ಕಳ್ಳತನ ಮಾಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
![](https://i0.wp.com/bantwalnews.com/wp-content/uploads/2023/12/9bhakki.jpg?resize=1024%2C578&ssl=1)
ಘಟನೆ ನಡೆದ ಸಂದರ್ಭ ಪೊಲೀಸ್ ತನಿಖೆ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಏಳು ತಿಂಗಳ ಹಿಂದೆ ಗೋಡೌನ್ ನ ಕೋಟ್ಯಂತರ ರೂ ಮೌಲ್ಯದ ಅಕ್ಕಿ ಕಳವು ಪ್ರಕರಣ: ಇಬ್ಬರ ಸೆರೆ"