ಬಡವರಿಗೆ ಸರಕಾರ ನೀಡುವ ಪಡಿತರ ಅಕ್ಕಿಯನ್ನು ಗೋಡೌನ್ ನಿಂದ ಕಳವು ಮಾಡಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣಾ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಜಯ್ ಮತ್ತು ರಝಾಕ್ ಅವರನ್ನು ಪೋಲೀಸರು ಬಂಧಿಸಲಾಗಿದ್ದು, ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ಬಂಟ್ವಾಳದ ತಲಪಾಡಿಯಲ್ಲಿ ಗೋಡೌನಲ್ಲಿ ಇರಿಸಲಾಗಿದ್ದ, ಕೋಟ್ಯಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನು ಕಳ್ಳತನ ಮಾಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.