ಶ್ರೀ ಕ್ಷೇತ್ರ ಕಾರಿಂಜಕ್ಕೆ ಮಹಾರಥ ಸಮರ್ಪಣೆ: ಬಿ.ಸಿ.ರೋಡ್‌ನಲ್ಲಿ ವೈಭವದ ಶೋಭಾಯಾತ್ರೆಗೆ ಚಾಲನೆ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮಹಾರಥದ ಸಮರ್ಪಣೆ ಕಾರ್ಯಕ್ರಮದ ಶೋಭಾಯಾತ್ರೆಗೆ ರವಿವಾರ ಬಿ.ಸಿ.ರೋಡ್‌ನಲ್ಲಿ ಚಾಲನೆ ನೀಡಲಾಯಿತು.

ಜಾಹೀರಾತು


ಬಿ.ಸಿ.ರೋಡ್ ನಿಂದ ಶ್ರೀ ಕ್ಷೇತ್ರ ಕಾರಿಂಜದವರೆಗೆ ನಡೆದ ಶೋಭಾಯಾತ್ರೆಗೆ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಬಳಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ದೀಪ ಬೆಳಗಿಸಿ ಹಿರಿಯ ಸಾಹಿತಿ ಕೆ.ಎಲ್. ಆಚಾರ್ಯ ಅವರು ಪ್ರಾರ್ಥನೆ ಸಲ್ಲಿಸಿದರು.

ಉದ್ಯಮಿ ಕೆ.ಕೆ.ಶೆಟ್ಟಿ. ಶ್ರೀ ರಕ್ತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಿ.ವಿಶ್ವನಾಥ, ಉಪಾಧ್ಯಕ್ಷ ಕೆ.ಸಂಜೀವ ಪೂಜಾರಿ ಗುರುಕೃಪಾ,ಮಾಜಿ ಅಧ್ಯಕ್ಷ ಗೋಪಾಲ ಸುವರ್ಣ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಕ್ಷೇತ್ರಾದ್ಯಕ್ಷ ದೇವಪ್ಪ ಪೂಜಾರಿ, ಉದ್ಯಮಿ ರಮೇಶ್ ಸಾಲ್ಯಾನ್, ನಿವೃತ್ತ ಕಂದಾಯ ಅಽಕಾರಿಗಳಾದ ರೋಹಿನಾಥ್ ಪಟ್ರಾಡಿ, ಅಣ್ಣು ಪೂಜಾರಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಅರ್ಚಕರಾದ ಮಿಥುನ್ ರಾಜ್ ನಾವಡ, ಜಯಶಂಕರ ಉಪಾಧ್ಯಾಯ, ಗ್ರಾಮಣಿ ವೆಂಕಟರಮಣ ಮುಚ್ಚಿನ್ನಾಯ, ಕಾವಳ ಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಉಪಾಧ್ಯಕ್ಷ ಪ್ರಶಾಂತ್, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀ ನಾರಾಯಣ ಶರ್ಮ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ, ನ್ಯಾಯವಾದಿ ರಾಜಾರಾಮ ನಾಯಕ್, ವ್ಯವಸ್ಥಾಪನ ಸಮಿತಿ ಸದಸ್ಯರು, ಮತ್ತಿತರರು ಭಾಗವಹಿಸಿದ್ದರು.


ರಥಯಾತ್ರೆ ಮೆರವಣಿಗೆಯು ವಿವಿಧ ವಾಹನಗಳ ಸಹಿತ ಬ್ಯಾಂಡ್ ವಾದ್ಯ, ಚೆಂಡೆ ವಾದನದೊಂದಿಗೆ ಬಂಟ್ವಾಳ, ವಗ್ಗ, ಕಾವಳಕಟ್ಟೆ, ಎನ್.ಸಿ ರೋಡ್, ಮಾರ್ಗವಾಗಿ ಕಾರಿಂಜ ದೇವಸ್ಥಾನದವರೆಗೆ ನಡೆಯಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶ್ರೀ ಕ್ಷೇತ್ರ ಕಾರಿಂಜಕ್ಕೆ ಮಹಾರಥ ಸಮರ್ಪಣೆ: ಬಿ.ಸಿ.ರೋಡ್‌ನಲ್ಲಿ ವೈಭವದ ಶೋಭಾಯಾತ್ರೆಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*