ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಾತೆಯ ಮಡಿಲು ಕಾರ್ಯಕ್ರಮ

ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳಮುಖ್ಯ,ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು,

ಜಾಹೀರಾತು

ಅವರು  ಶುಕ್ರವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ (ರಿ.)ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ದಲ್ಲಿ ಅತಿಥಿ ಯಾಗಿ ಭಾಗವಹಿಸಿ ಮಾತಾಡಿದರು.

ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.)ಮಾಣಿ ಯ ಮಹಿಳಾ ಅಧ್ಯಕ್ಷೆ ಹರಿನಾಕ್ಷಿ ಮುರುವ ನೆರೆವೇರಿಸಿದರು.,. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ,ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.)ಮಾಣಿ ಯ ಅಧ್ಯಕ್ಷರಾದ ಸುರೇಶ್ ಸೂರ್ಯ,ಯುವವಾಹಿನಿ( ರಿ.) ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಮೊದಲಾದವರು ಉಪಸ್ಥಿತರಿದ್ದರು.. ಸಂಪನ್ಮೂಲ ವ್ಯಕ್ತಿಗಳಾಗಿ “ಸ್ವಸ್ಥ ಮಹಿಳೆ- ಸ್ವಸ್ಥ ಮನೆ” ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್,ಮಹಿಳೆಯರಿಗೆ ಆಗುವ ಅರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ನೀಡಿ,ಮಹಿಳೆಯರೊಂದಿಗೆ ಮುಕ್ತವಾಗಿ ಚರ್ಚಿಸಿದರು.

ಜಾಹೀರಾತು

“ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ “ಎಂಬ ವಿಷಯದ ಬಗ್ಗೆ ವಕೀಲರು, ನೋಟರಿ ಆದ ಶೋಭಾಲತಾ ಸುವರ್ಣ ವಿಚಾರ ವಿನಿಮಯ ಮಾಡಿದರು. ಕಾರ್ಯಕ್ರಮದಲ್ಲಿ ಸಂಘದ 10 ಗ್ರಾಮಗಳ ಮಹಿಳಾ ಅಧ್ಯಕ್ಷರುಗಳನ್ನು, ಮಾಜಿ ಅಧ್ಯಕ್ಷರುಗಳನ್ನು, ಪಂಚಾಯತ್ ಸದಸ್ಯೆರುಗಳನ್ನು ಅಭಿನಂದಿಸಾಲಾಯಿತು, ಸಂಘದ ಸದಸ್ಯೆ ಭಾರತೀ ಪ್ರಾರ್ಥಿಸಿ,ಯುವವಾಹಿನಿ(ರಿ.) ಮಾಣಿ ಘಟಕದ ಕಾರ್ಯದರ್ಶಿ ಶಾಲಿನಿ ಸ್ವಾಗತಿಸಿ,ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ  ಪ್ರಸ್ತಾವಿಕ ಮಾಡಿ, ಸದಸ್ಯೆಯಾದ ಶುಭ ಪೆರ್ನೆ ವಂದಿಸಿದರು. ಮಾಣಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಉಷಾ ದಿನಕರ್ ಹಾಗೂ ಘಟಕದ ಸದಸ್ಯ ರಾಜೇಶ್ ಬಲ್ಯ ಕಾರ್ಯಕ್ರಮ ನಿರೂಪಿಸಿದರು   ವರದಿ: ಚಿನ್ನಾ ಮೈರ, ಕಲ್ಲಡ್ಕ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಾತೆಯ ಮಡಿಲು ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*