ಬಂಟ್ವಾಳ

ಬಂಟ್ವಾಳ ಬ್ರಹ್ಮರಥೋತ್ಸವ: ಅಂಚೆ ಇಲಾಖೆ ವಿಶೇಷ ಮಳಿಗೆಯಲ್ಲಿ ಏನೇನಿದೆ?

ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿ ದಿವ್ಯ ಅಮೃತ ಹಸ್ತದಿಂದ ಬಂಟ್ವಾಳ ಶ್ರೀ ಕಾಶೀಮಠದ ಶ್ರೀ ದೇವೇಂದ್ರ ತೀರ್ಥ ಸ್ವಾಮೀಜಿ ವೃಂದಾವನದ ಶ್ರೀ ಹನುಮಂತ ದೇವರಿಗೆ ಸ್ವರ್ಣ ತುಳಸಿ ಮಾಲೆಯನ್ನು 200 ವರ್ಷದ ರಥೋತ್ಸವದ ಅಂಗವಾಗಿ ಸಮರ್ಪಿಸಲಾಯಿತು.

ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವ ಹಿನ್ನೆಲೆಯಲ್ಲಿ ಈಗಾಗಲೇ ಉತ್ಸವಾದಿಗಳು ಆರಂಭಗೊಂಡಿದ್ದು, 16ರಂದು ಬ್ರಹ್ಮರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಅಂಚೆ ಕಚೇರಿ ವತಿಯಿಂದ ಅಂಚೆ ಸೇವಾ ಸೌಲಭ್ಯಗಳ ವಿಶೇಷ ಮಳಿಗೆಯನ್ನು ತೆರೆಯಲಾಗಿದ್ದು, ಮಾರ್ಚ್ 14ರಿಂದ 16ರವರೆಗೆ ಇರಲಿದೆ. ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶ್ರೀನಿವಾಸ ರೆಸಿಡೆನ್ಸಿಯಲ್ಲಿ ಈ ಮಳಿಗೆ ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ಇರಲಿದೆ.

ಜಾಹೀರಾತು

ಇಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಗಳು, ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಗಳು, ಅಂಚೆ ಜೀವವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್, ಮೊಬೈಲ್ ಬ್ಯಾಂಕಿಂಗ್, ಸಮೂಹ ಅಪಘಾತ ವಿಮೆ ಕುರಿತ ಮಾಹಿತಿ, ಅಂಚೆ ಚೀಟಿ ಸಂಗ್ರಹ ಮತ್ತು ಮಾರಾಟ, ಸಿ.ಎಸ್.ಸಿ, ಸೇವೆ, 300 ರೂ ಪಾವತಿಸಿ ನಿಮ್ಮದೇ ಭಾವಚಿತ್ರದ 12 ಅಂಚೆ ಚೀಟಿ ಪಡೆಯುವ ಯೋಜನೆಯ ಸೌಲಭ್ಯ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts