ಬಂಟ್ವಾಳ

ಕಳೆದ ಚುನಾವಣೆಯದ್ದೇ ಬಾಡಿಗೆ ಬಾಕಿ, ಈ ಚುನಾವಣೆ ಆರಂಭದಲ್ಲಿ ಪಾವತಿ ಗ್ಯಾರಂಟಿ ನೀಡಿ – ಟೂರಿಸ್ಟ್ ಕ್ಯಾಬ್, ವ್ಯಾನ್ ಚಾಲಕ, ಮಾಲೀಕರ ಒತ್ತಾಯ, ಮನವಿ ಸಲ್ಲಿಕೆ

ಬಂಟ್ವಾಳ: ಚುನಾವಣಾ ವಾಹನವಾಗಿ ಬಳಸಲಾಗುವ ಟೂರಿಸ್ಟ್ ಕಾರು, ವ್ಯಾನುಗಳಿಗೆ ಕಳೆದ 2023ರ ವಿಧಾನಸಭಾ ಚುನಾವಣೆಯ ಸಂದರ್ಭ ನೀಡಬೇಕಾಗಿದ್ದ ಬಾಡಿಗೆಯನ್ನು ಇನ್ನೂ ನೀಡಿಲ್ಲ ಎಂದು ಆರೋಪಿಸಿ ಬಂಟ್ವಾಳದ ಆಡಳಿತ ಸೌಧದ ಮುಂಭಾಗ ಟೂರಿಸ್ಟ್ ಕಾರು, ವ್ಯಾನು ಚಾಲಕ, ಮಾಲೀಕರ ಸಂಘದ ಪದಾಧಿಕಾರಿಗಳು, ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಾಹೀರಾತು

ಬಳಿಕ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ವ್ಯಾನು ಚಾಲಕ ಮಾಲೀಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಸದಾನಂದ ನಾವರ, ಈಗಾಗಲೇ ಹಲವು ಬಾರಿ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಮಾಡಿದರೆ, ಒತ್ತಾಯಪೂರ್ವಕವಾಗಿ ವಾಹನಗಳನ್ನು ಸೀಜ್ ಮಾಡಿದರೆ, ವಾಹನಗಳನ್ನು ಕಚೇರಿಯ ಬಳಿ ಇಟ್ಟು ನಾವು ಮರಳುತ್ತೇವೆ. ಈ ಬಾರಿ ವಾಹನಗಳನ್ನು ಬಾಡಿಗೆಗೆ ಪಡೆಯುವ ಸಂದರ್ಭ ಮೊದಲೇ ಎಷ್ಟು ಪಾವತಿ ಎಂಬುದನ್ನು ನಿಗದಿಪಡಿಸಿಕೊಳ್ಳಬೇಕು, ಇಲ್ಲವಾದರೆ ನಾವು ಮೋಸ ಹೋಗಬಹುದು ಎಂದರು.

ಈ ಬಾರಿ ಮೊದಲೇ ಪಾವತಿಯ ಗ್ಯಾರಂಟಿ ಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಳೆದ 2023ರ ವಿಧಾನಸಭಾ ಚುನಾವಣೆಗೆ ವಿವಿಧ ಇಲಾಖೆಗಳಿಗೆ ನಮ್ಮ ಟೂರಿಸ್ಟ್ ವಾಹನಗಳಲ್ಲಿ ವಶಪಡಿಸಿ, ಸರಕಾರದ ಆದೇಶ ಪ್ರಕಾರ ಪಾವತಿ ನೀಡುವುದಾಗಿ ತಿಳಿಸಿದ್ದಾರೆ. ಕಾರಿಗೆ 2700 ರೂ, ವ್ಯಾನು 3800, ಮಿನಿಬ ಬಸ್ 8,200 ರೂ ನೀಡುವುದಾಗಿ ತಿಳಿಸಿದ್ದರು. ಆದರೆ ಹೇಳಿದ ಪ್ರಕಾರ, ಕಾರ್ಯನಿರ್ವಹಿಸಿದ ಎಲ್ಲ ಚಾಲಕರಿಗೆ ಬಾಡಿಗೆ ನೀಡದೆ ತೊಂದರೆ ಉಂಟುಮಾಡಿದೆ ಎಂದು ಆರೋಪಿಸಿದರು.

ಈ ಸಂದರ್ಭ ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ.ರೋಡ್, ಪ್ರಮುಖರಾದ ವಿನ್ಸೆಂಟ್ ರೋಡ್ರಿಗಸ್, ಸುನಿಲ್ ಲೋಬೊ, ವಿಠಲ ರೈ, ಸುರೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts