ಬಂಟ್ವಾಳ

ಕಳೆದ ಚುನಾವಣೆಯದ್ದೇ ಬಾಡಿಗೆ ಬಾಕಿ, ಈ ಚುನಾವಣೆ ಆರಂಭದಲ್ಲಿ ಪಾವತಿ ಗ್ಯಾರಂಟಿ ನೀಡಿ – ಟೂರಿಸ್ಟ್ ಕ್ಯಾಬ್, ವ್ಯಾನ್ ಚಾಲಕ, ಮಾಲೀಕರ ಒತ್ತಾಯ, ಮನವಿ ಸಲ್ಲಿಕೆ

ಬಂಟ್ವಾಳ: ಚುನಾವಣಾ ವಾಹನವಾಗಿ ಬಳಸಲಾಗುವ ಟೂರಿಸ್ಟ್ ಕಾರು, ವ್ಯಾನುಗಳಿಗೆ ಕಳೆದ 2023ರ ವಿಧಾನಸಭಾ ಚುನಾವಣೆಯ ಸಂದರ್ಭ ನೀಡಬೇಕಾಗಿದ್ದ ಬಾಡಿಗೆಯನ್ನು ಇನ್ನೂ ನೀಡಿಲ್ಲ ಎಂದು ಆರೋಪಿಸಿ ಬಂಟ್ವಾಳದ ಆಡಳಿತ ಸೌಧದ ಮುಂಭಾಗ ಟೂರಿಸ್ಟ್ ಕಾರು, ವ್ಯಾನು ಚಾಲಕ, ಮಾಲೀಕರ ಸಂಘದ ಪದಾಧಿಕಾರಿಗಳು, ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಾಹೀರಾತು

ಬಳಿಕ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ವ್ಯಾನು ಚಾಲಕ ಮಾಲೀಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಸದಾನಂದ ನಾವರ, ಈಗಾಗಲೇ ಹಲವು ಬಾರಿ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಮಾಡಿದರೆ, ಒತ್ತಾಯಪೂರ್ವಕವಾಗಿ ವಾಹನಗಳನ್ನು ಸೀಜ್ ಮಾಡಿದರೆ, ವಾಹನಗಳನ್ನು ಕಚೇರಿಯ ಬಳಿ ಇಟ್ಟು ನಾವು ಮರಳುತ್ತೇವೆ. ಈ ಬಾರಿ ವಾಹನಗಳನ್ನು ಬಾಡಿಗೆಗೆ ಪಡೆಯುವ ಸಂದರ್ಭ ಮೊದಲೇ ಎಷ್ಟು ಪಾವತಿ ಎಂಬುದನ್ನು ನಿಗದಿಪಡಿಸಿಕೊಳ್ಳಬೇಕು, ಇಲ್ಲವಾದರೆ ನಾವು ಮೋಸ ಹೋಗಬಹುದು ಎಂದರು.

ಜಾಹೀರಾತು

ಈ ಬಾರಿ ಮೊದಲೇ ಪಾವತಿಯ ಗ್ಯಾರಂಟಿ ಕೊಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಳೆದ 2023ರ ವಿಧಾನಸಭಾ ಚುನಾವಣೆಗೆ ವಿವಿಧ ಇಲಾಖೆಗಳಿಗೆ ನಮ್ಮ ಟೂರಿಸ್ಟ್ ವಾಹನಗಳಲ್ಲಿ ವಶಪಡಿಸಿ, ಸರಕಾರದ ಆದೇಶ ಪ್ರಕಾರ ಪಾವತಿ ನೀಡುವುದಾಗಿ ತಿಳಿಸಿದ್ದಾರೆ. ಕಾರಿಗೆ 2700 ರೂ, ವ್ಯಾನು 3800, ಮಿನಿಬ ಬಸ್ 8,200 ರೂ ನೀಡುವುದಾಗಿ ತಿಳಿಸಿದ್ದರು. ಆದರೆ ಹೇಳಿದ ಪ್ರಕಾರ, ಕಾರ್ಯನಿರ್ವಹಿಸಿದ ಎಲ್ಲ ಚಾಲಕರಿಗೆ ಬಾಡಿಗೆ ನೀಡದೆ ತೊಂದರೆ ಉಂಟುಮಾಡಿದೆ ಎಂದು ಆರೋಪಿಸಿದರು.

ಈ ಸಂದರ್ಭ ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ.ರೋಡ್, ಪ್ರಮುಖರಾದ ವಿನ್ಸೆಂಟ್ ರೋಡ್ರಿಗಸ್, ಸುನಿಲ್ ಲೋಬೊ, ವಿಠಲ ರೈ, ಸುರೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ