ಬಂಟ್ವಾಳ: ಬಂಟ್ವಾಳದ ರಿಕ್ಷಾ ಭವನದಲ್ಲಿ ರಿಕ್ಷಾ ಡ್ರೈವರ್ಸ್ ಅಸೋಸಿಯೇಷನ್ 48ನೇ ವಾರ್ಷಿಕ ಮಹಾಸಭೆ ಅಧ್ಯಕ್ಷ ರಾಜೇಶ್ ಬೊಳ್ಳುಕಲ್ಲು ಅಧ್ಯಕ್ಷತೆಯಲ್ಲಿ ನಡೆಯಿತು.
ಜಾಹೀರಾತು
ಈ ಸಂದರ್ಭ ಮಾತನಾಡಿದ ಅವರು, ಸಮಾಜದಲ್ಲಿ ರಿಕ್ಷಾ ಚಾಲಕರ ಕೊಡುಗೆ ಅಪಾರ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ನ್ಯಾಯವಾದಿ ಹೇಮಚಂದ್ರ ಮಾತನಾಡಿ, ಕಾನೂನು ಅರಿವು ಮೂಡಿಸಿದರು.
ಜಾಹೀರಾತು
ಸಂಘದ ಉಪಾಧ್ಯಕ್ಷರಾದ ಹುಸೈನ್ ಬಿ ಮಾತನಾಡಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಪ್ರಕಾಶ್ ಹಾಗೂ ಖಜಾಂಜಿ ಕೃಷ್ಣಪ್ಪ ಉಪಸ್ಥಿತರಿದ್ದರು. ಸಂಘದಲ್ಲಿ ದುಡಿದ ಹಿರಿಯ ರಿಕ್ಷಾ ಚಾಲಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಸ್ವಾಗತಿಸಿದರು, ಉಸ್ಮಾನ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಿಕ್ಷಾ ಡ್ರೈವರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ"