ಬಂಟ್ವಾಳ

ಶಾಲಾ ಕಟ್ಟಡ ಶಿಲಾನ್ಯಾಸ ನೆರವೇರಿಸಿದ ಕಾಶೀ ಮಠಾಧೀಶರು

ಪಾಣೆಮಂಗಳೂರಿನ ಎಸ್.ವಿ.ಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸವಿನೆನಪಿನ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜರಗಿತು.ಶ್ರೀ ಕಾಶೀ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು.

ಜಾಹೀರಾತು

ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಯತಿವರ್ಯರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನಗೈದರು ಗೌರವ ಉಪಸ್ಥಿತಿಯಲ್ಲಿದ್ದ ಡಾ. ಪಿ.ದಯಾನಂದ ಪೈ ಬೆಂಗಳೂರು ಇವರು ಶುಭ ಹಾರೈಸಿ ತಮ್ಮ ದೇಣಿಗೆಯನ್ನು ಪ್ರಕಟಿಸಿದರು. ದೇವಾಲಯದ ಟ್ರಸ್ಟಿಗಳು ಶಾಲಾ  ಆಡಳಿತ ಮಂಡಳಿಯವರು, ವೈದಿಕರು, ನಿವೃತ್ತ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು, ಪೋಷಕರು ಊರ ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಗುರುವೃಂದದವರು ಉಪಸ್ಥಿತರಿದ್ದರು ಶಾಲಾ ಸಂಚಾಲಕರಾದ ಐ. ಯೋಗೀಶ್ ಪೈಯವರು ಸ್ವಾಗತಿಸಿ ಕೃತಜ್ಞತೆ ಸಮರ್ಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.