ಬಂಟ್ವಾಳ

ಇಂದು ಬಂಟ್ವಾಳದಲ್ಲಿ ಬ್ರಹ್ಮರಥೋತ್ಸವ: ಶುಕ್ರವಾರದ ಕಾರ್ಯಕ್ರಮಗಳು ಏನಿದ್ದವು?

ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮಗಳ 200 ನೇ ಸಂಭ್ರಮ ಸಹಿತ ಬ್ರಹ್ಮರಥೋತ್ಸವ ಶನಿವಾರ ಸಂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಈಗಾಗಲೇ ಆಗಮಿಸಿ ಮಾರ್ಚ್ 10ರಿಂದ ಪ್ರತಿದಿನ ನಡೆಯುತ್ತಿರುವ ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಶುಕ್ರವಾರ ನಡೆದ ಕಾರ್ಯಕ್ರಮಗಳ ಫೊಟೋವಿವರಗಳು ಇಲ್ಲಿವೆ.

ಜಾಹೀರಾತು

ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ರಥೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಸಣ್ಣ ರಥೋತ್ಸವ (ಬೆಳ್ಳಿರಥೋತ್ಸವ) ನಡೆಯಿತು. ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಪಾಲ್ಗೊಂಡಿದ್ದರು. ರಾತ್ರಿ ದೀಪ ನಮಸ್ಕಾರ, ಬಲಿ, ಜಲಕ್ರೀಡೋತ್ಸವ, ಗೋಪುರೋತ್ಸವ, ಮೃಗಬೇಟೆ, ಬೆಳ್ಳಿ ಲಾಲ್ಕಿ ಉತ್ಸವ, ಬೆಳ್ಳಿ ರಥೋತ್ಸವ, ವಸಂತ ಪೂಜೆ ಇತ್ಯಾದಿ ಕಾರ್ಯಕ್ರಮಗಳು ನಡೆದವು. ಶುಕ್ರವಾರ ರಾತ್ರಿ ಜಲಕ್ರೀಡೋತ್ಸವ ಸಂದರ್ಭದಲ್ಲಿ ಶ್ರೀ ಕಾಶೀ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ದೇವರ ಜಲಕ್ರೀಡೆ ನಡೆಯಿತು ಬೆಳ್ಳಿಲಾಲ್ಕಿ ಉತ್ಸವದೊಂದಿಗೆ  ಶ್ರೀ ಸ್ವಾಮೀಜಿಯವರ ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ದಿಗ್ವಿಜಯ ಜರುಗಿತು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.