ಬಂಟ್ವಾಳ

ಲೋಕಸಭಾ ಚುನಾವಣೆ – ಬಂಟ್ವಾಳ ಕ್ಷೇತ್ರದಲ್ಲಿ ತಯಾರಿ ಕುರಿತು ಸಹಾಯಕ ಚುನಾವಣಾಧಿಕಾರಿ ಡಾ. ಉದಯ್ ಶೆಟ್ಟಿ ಮಾಹಿತಿ

ಜಾಹೀರಾತು

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಅಂತಿಮ ಸೇರ್ಪಡೆಗೆ ಮಾ.24ರವರೆಗೆ ಅವಕಾಶವಿದ್ದು, ಸದ್ಯ ಮತದಾರರ ಪಟ್ಟಿಯಲ್ಲಿ ಬಂಟ್ವಾಳದಲ್ಲಿ ಒಟ್ಟು 227956 ಮತದಾರರು ಇದ್ದು, 1,12,159 ಪುರುಷರು, 1,15,836 ಮಹಿಳೆಯರು ಇದ್ದಾರೆ. ಯುವ ಮತದಾರರು 4,672 ಇದ್ದು, ಇವರ ಪೈಕಿ 2426 ಪುರುಷರು, 2246 ಮಹಿಳೆಯರು ಇದ್ದಾರೆ. 85ಕ್ಕೂ ಮೇಲ್ಪಟ್ಟವರ ಪೈಕಿ 1774 ಮಂದಿ ಇದ್ದು, ಇವರಲ್ಲಿ 100 ವರ್ಷ ದಾಟಿದವರು 17 ಮಂದಿ, 85ರಿಂದ 89 ವರ್ಷದವರು 1160, 90ರಿಂದ 99ವರ್ಷದವರು 597 ಮಂದಿ ಇದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ ಹೇಳಿದರು.

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾ ಕಚೇರಿಯಲ್ಲಿ ಭಾನುವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಂಡಗಳನ್ನು ರಚಿಸಲಾಗಿದ್ದು, ಸಭೆ, ಸಮಾರಂಭ, ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಸಭೆ, ಪ್ರಚಾರ ಸಭೆ ಇತ್ಯಾದಿಗಳನ್ನು ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕಾಗಿದೆ. ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ. ಇದ್ದು, ವಿಧಾನಸಭಾ ಕ್ಷೇತ್ರದ ನೋಡಲ್ ಅಧಿಕಾರಿಯಾಗಿ ಶಮಂತ್ ಕುಮಾರ್ ಇರಲಿದ್ದಾರೆ.  ಬಂಟ್ವಾಳ ಕ್ಷೇತ್ರದಲ್ಲಿ ಮೂರು ಚೆಕ್ ಪೋಸ್ಟ್ ಗಳನ್ನು ರಚಿಸಲಾಗಿದ್ದು, ಆನೆಕಲ್ಲು, ಸಾಲೆತ್ತೂರಿನ ಮೆದು, ಹಾಗೂ ಕರೋಪಾಡಿಯ ನೆಲ್ಲಿಕಟ್ಟೆಯಲ್ಲಿ ಇವೆ ಎಂದರು.

 

ನೀತಿ ಸಂಹಿತೆ ಉಲ್ಲಂಘಿಸಿದರೆ ದೂರು ನೀಡಿ:  ಚುನಾವಣಾ ಸಂಬಂಧಿಸಿದಂತೆ 08255-232500 ಕಂಟ್ರೋಲ್ ರೂಮ್ ನಂಬರ್ ಆಗಿದ್ದು, ದಿನದ 24 ತಾಸುಗಳೂ ಕಾರ್ಯಾಚರಣೆ ನಡೆಸುತ್ತಿವೆ. ನೀತಿ ಸಂಹಿತೆ ಉಲ್ಲಂಘನೆ ದೂರುಗಳನ್ನು ಇದಕ್ಕೆ ನೀಡಬಹುದು ಅಲ್ಲದೆ,  ಸಿ-ವಿಝಿಲ್ ಮೊಬೈಲ್ ಆಪ್ ಮೂಲಕ ಜಿಲ್ಲೆಯಲ್ಲಿ ಚುನಾವಣಾ ಸಂಬಂಧಿಸಿದಂತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಫೊಟೋ ಹಾಗೂ ವಿಡಿಯೋಗಳ ಮೂಲಕ ದೂರು ದಾಖಲಿಸಬಹುದಾಗಿದೆ. ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಸುವಿಧಾ ಆಪ್ ಮೂಲಕ ಚುನಾವಣಾ ಪ್ರಚಾರ ಕಾರ್ಯಗಳಿಗೆ ಅನುಮತಿ ಪಡೆಯಬಹುದು ಎಂದರು.ಚುನಾವಣೆಗೆ ಸಂಬಂಧಿಸಿದಂತೆ ಹಲವು ವಿಚಾರಗಳಿಗೆ ತಾಲೂಕು ಮಟ್ಟದಲ್ಲಿ 15 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಉಪತಹಸೀಲ್ದಾರ್ ನವೀನ್ ಬೆಂಜನಪದವು, ಅಧಿಕಾರಿಗಳಾದ ಶಮಂತ್ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

8 hours ago