ಬಂಟ್ವಾಳ

ಪಿಎಂಶ್ರೀ ಯೋಜನೆಗೆ ಬಂಟ್ವಾಳ ತಾಲೂಕಿನ 3, ಶಿಕ್ಷಣ ಇಲಾಖೆ ವ್ಯಾಪ್ತಿಯ 4 ಶಾಲೆಗಳು ಆಯ್ಕೆ

ಸರ್ಕಾರಿ ಶಾಲೆಗಳ ಮಕ್ಕಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ಪಿಎಂಶ್ರೀ, ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ, ಅಡಿಯಲ್ಲಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಒಳಪಟ್ಟು ನಾಲ್ಕು ಶಾಲೆಗಳು ಆಯ್ಕೆಗೊಂಡಿವೆ. ಇವುಗಳಲ್ಲಿ ಬಂಟ್ವಾಳ ತಾಲೂಕಿನ 3 ಮತ್ತು ಉಳ್ಳಾಲ ತಾಲೂಕಿನ ಒಂದು ಶಾಲೆ ಸೇರಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ತಿಳಿಸಿದ್ದಾರೆ.

ದಡ್ಡಲಕಾಡು ಶಾಲೆ

ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಹೂಹಾಕುವಕಲ್ಲು ಹಿರಿಯ ಪ್ರಾಥಮಿಕ ಶಾಲೆ,  ಬಿ.ಸಿ.ರೋಡಿನ ಕೊಡಂಗೆ ಹಿರಿಯ ಪ್ರಾಥಮಿಕ ಶಾಲೆ, ವಿಟ್ಲದ ಹಿರಿಯ ಪ್ರಾಥಮಿಕ ಶಾಲೆ ಈ ವರ್ಷದ ಸಾಲಿಗೆ ಆಯ್ಕೆಗೊಂಡಿದ್ದು, ಇದರಲ್ಲಿ ಹೂಹಾಕುವಕಲ್ಲು ಮುಡಿಪು ಬಳಿ ಉಳ್ಳಾಲ ತಾಲೂಕು ವ್ಯಾಪ್ತಿಗೆ ಒಳಪಡುತ್ತದೆ. ವಿಜ್ಞಾನ ಮತ್ತು ಗಣಿತ ಕಿಟ್ ಗಳು, ಸ್ಮಾರ್ಟ್ ತರಗತಿಗಳು ಮತ್ತು ಡಿಜಿಟಲ್ ಗ್ರಂಥಾಲಯ ಇವೆಲ್ಲವೂ ದೊರೆಯಲಿದೆ.

ಜಾಹೀರಾತು

ಪಿಎಂಶ್ರೀ ಯೋಜನೆಗೆ ಆಯ್ಕೆಯಾಗಿರುವ ಶಾಲೆಗಳಿಗೆ ಸೌರಫಲಕಗಳು, ಎಲ್ ಇಡಿ ದೀಪಗಳು, ಉದ್ಯಾನವನ, ತ್ಯಾಜ್ಯ ನಿರ್ವಹಣೆ, ಮಳೆನೀರು ಕೊಯ್ಲು ಸೌಲಭ್ಯ ದೊರೆಯಲಿದೆ. ಜತೆಗೆ ಬೋಧನಾ ವಿಧಾನವು ಆಟ, ಆವಿಷ್ಕಾರ, ಚರ್ಚೆ ಆಧರಿತವಾಗಿರುತ್ತದೆ. ವಿಜ್ಞಾನ ಮತ್ತು ಗಣಿತ ಕಿಟ್ ವಿತರಣೆ, ಸ್ಮಾರ್ಟ್ ತರಗತಿಗಳು, ಡಿಜಿಟಲ್ ಗ್ರಂಥಾಲಯ, ಬೋಧನಾ ಕ್ರಮ, ಮೂಲಸೌಕರ್ಯ ಬಲಪಡಿಸುವುದು ಸೇರಿ ಇತರ ಸೌಲಭ್ಯ ಒದಗಿಸುವುದು ಯೋಜನೆಯ ಉದ್ದೇಶವಾಗಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ