ಬಂಟ್ವಾಳದಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಿಂದ ಕವಾಯತು ವೀಕ್ಷಣೆ

ಲೋಕಸಭೆ ಚುನಾವಣೆಗೆ ಗೃಹರಕ್ಷಕರ ಕರ್ತವ್ಯ ನಿಯೋಜನೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ಬಂಟ್ವಾಳ ಗೃಹರಕ್ಷಕ ದಳಕ್ಕೆ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಡಾ. ಮುರಲೀ ಮೋಹನ ಚೂಂತಾರು ಆಗಮಿಸಿ ಸಭೆ ನಡೆಸಿದರು. ಈ ಸಂದರ್ಭ ಕವಾಯತು ವೀಕ್ಷಣೆ ನಡೆಸಿ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಹಾಗೂ ನಿಷ್ಕ್ರಿಯಗೊಂಡ ಗೃಹರಕ್ಷಕರ ಮನವೊಲಿಸಿ ಲೋಕಸಭಾ ಚುನಾವಣೆಗೆ ನಿಯೋಜಿಸುವ ಕುರಿತು ಚರ್ಚಿಸಿದರು. ಈ ಸಂದರ್ಭ ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರು ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿಯನ್ನು ಮತ್ತು ಭಾಗ ಸಂಖ್ಯೆಯನ್ನು ಘಟಕಾಧಿಕಾರಿಯವರಲ್ಲಿ ನೀಡುವಂತೆ ಆದೇಶಿಸಿದರು. ಬಂಟ್ವಾಳ ಘಟಕದ ಘಟಕಾಧಿಕಾರಿ ಐತಪ್ಪ ಹಾಗೂ ಬಂಟ್ವಾಳ ಘಟಕದ ಗೃಹರಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಿಂದ ಕವಾಯತು ವೀಕ್ಷಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*