ಬಂಟ್ವಾಳ

ಬಂಟ್ವಾಳದಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಿಂದ ಕವಾಯತು ವೀಕ್ಷಣೆ

ಲೋಕಸಭೆ ಚುನಾವಣೆಗೆ ಗೃಹರಕ್ಷಕರ ಕರ್ತವ್ಯ ನಿಯೋಜನೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ಬಂಟ್ವಾಳ ಗೃಹರಕ್ಷಕ ದಳಕ್ಕೆ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಡಾ. ಮುರಲೀ ಮೋಹನ ಚೂಂತಾರು ಆಗಮಿಸಿ ಸಭೆ ನಡೆಸಿದರು. ಈ ಸಂದರ್ಭ ಕವಾಯತು ವೀಕ್ಷಣೆ ನಡೆಸಿ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಹಾಗೂ ನಿಷ್ಕ್ರಿಯಗೊಂಡ ಗೃಹರಕ್ಷಕರ ಮನವೊಲಿಸಿ ಲೋಕಸಭಾ ಚುನಾವಣೆಗೆ ನಿಯೋಜಿಸುವ ಕುರಿತು ಚರ್ಚಿಸಿದರು. ಈ ಸಂದರ್ಭ ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರು ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿಯನ್ನು ಮತ್ತು ಭಾಗ ಸಂಖ್ಯೆಯನ್ನು ಘಟಕಾಧಿಕಾರಿಯವರಲ್ಲಿ ನೀಡುವಂತೆ ಆದೇಶಿಸಿದರು. ಬಂಟ್ವಾಳ ಘಟಕದ ಘಟಕಾಧಿಕಾರಿ ಐತಪ್ಪ ಹಾಗೂ ಬಂಟ್ವಾಳ ಘಟಕದ ಗೃಹರಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

8 hours ago