ಬಂಟ್ವಾಳ

ಯಕ್ಷಗಾನ ಹಿರಿಯ ಕಲಾವಿದ ದಿವಾಕರ ರೈ ಸಂಪಾಜೆ ಅವರಿಗೆ ಸನ್ಮಾನ

ಬಂಟ್ವಾಳ: ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಆವರಣದಲ್ಲಿ ಆಯೋಜಿಸಿದ 15ನೇ ವರ್ಷದ ಯಕ್ಷಗಾನ ಪ್ರದರ್ಶನದ ವೇಳೆ ಹಿರಿಯ ಕಲಾವಿದ ದಿವಾಕರ ರೈ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕ್ಷೇತ್ರದಲ್ಲಿ ದುಡಿದ ಹಿನ್ನೆಲೆಯಲ್ಲಿ ದೊರಕಿದ ಈ ಸನ್ಮಾನದಿಂದಾಗಿ ತನ್ನ ಹೊಣೆಗಾರಿಕೆ ಇನ್ನಷ್ಟು ಜಾಸ್ತಿಯಾಗಿದೆ ಎಂದು ಈ ಸಂದರ್ಭ ದಿವಾಕರ ರೈ ಹೇಳಿದರು.

ಜಾಹೀರಾತು

ಸನ್ಮಾನ ನೆರವೇರಿಸಿ ಮಾತನಾಡಿದ ಚಂದ್ರಹಾಸ ರೈ ಬಾಲಾಜಿಬೈಲು, ಸಂಘಟಕರು ಸಾಧಕರನ್ನು ಗುರುತಿಸಿ ಸನ್ಮಾನಿಸುವುದು ಉಲ್ಲೇಖನೀಯ. ತನ್ನನ್ನು ತಾವೇ ಸನ್ಮಾನಿಸಿಕೊಳ್ಳುವ ಪ್ರವೃತಿ ಹೆಚ್ಚಾಗುತ್ತಿರುವ ವೇಳೆ  ಇಂದು ನಿಜವಾದ ಸನ್ಮಾನ ನಡೆದಿದ್ದು, ಅಭಿನಂದನೀಯ ಎಂದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್ಟ ಶುಭ ಹಾರೈಸಿದರು. ಯಕ್ಷಮಿತ್ರರು ಕೈಕಂಬದ ಪ್ರಮುಖರಾದ ಸದಾನಂದ ಶೆಟ್ಟಿ ರಂಗೋಲಿ, ಶಂಕರ ಶೆಟ್ಟಿ ಪರಾರಿಗುತ್ತು, ಭುಜಂಗ ಸಾಲಿಯನ್, ಸದಾಶಿವ ಕೈಕಂಬ, ವಿಶ್ವನಾಥ, ಹನುಮಗಿರಿ ಮೇಳದ ಪ್ರಬಂಧಕ, ಕಲಾವಿದ ಹರೀಶ್ ಬಳಂತಿಮೊಗರು ಉಪಸ್ಥಿತರಿದ್ದರು. ಕಿಶೋರ್ ಭಂಡಾರಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಹನುಮಗಿರಿ ಮೇಳದವರಿಂದ ನಮೋ ರಘುವಂಶ ದೀಪ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ