ಇಂದಿನ ವಿಶೇಷ

ಧರ್ಮಸ್ಥಳಕ್ಕೆ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

ಜಾಹೀರಾತು

 

“ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ”

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಲೋಕಸಭೆ ಚುನಾವಣೆ ತಯಾರಿ ಹೇಗಿದೆ ಎಂದು ಕೇಳಿದಾಗ, “ನಾನೀಗ ಮಂಜುನಾಥನ ಸನ್ನಿಧಿಯಲ್ಲಿ ಇದ್ದೇನೆ. ಧರ್ಮಸ್ಥಳ ಹಾಗೂ ಮಂಜುನಾಥನ ಶಕ್ತಿಯನ್ನು “ಮಾತು ಬಿಡದ ಮಂಜುನಾಥ” ಎಂದೇ ಬಣ್ಣಿಸುತ್ತಾರೆ. ಅದೇ ರೀತಿ ನಾವು ಕೂಡ ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಬಿಡದೆ ಪಾಲಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ, ಜನರ ಮಧ್ಯೆ ಹೋಗಿ ನಮಗೆ ಮತ್ತಷ್ಟು ಹೆಚ್ಚಿನ ಶಕ್ತಿ ಕೊಡಿ ಎಂದು ಮತ ಕೇಳುತ್ತೇವೆ. ಈ ದೇವರು ನಮಗೆ ನುಡಿದಂತೆ ನಡೆಯಲು ಶಕ್ತಿ ನೀಡಿರುವುದೇ ನಮ್ಮ ಭಾಗ್ಯ.ನಾವು ನಮ್ಮ ಕೆಲಸ ಮಾಡಿದ್ದೇವೆ. ಇದರ ಮೇಲೆ ಜನ ತೀರ್ಮಾನ ಮಾಡುತ್ತಾರೆ. ಮಹಿಳೆಯರು ಇಲ್ಲಿಗೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಿ ಬರುತ್ತಿದ್ದಾರೆ. ಆ ಮೂಲಕ ತೀರ್ಥಯಾತ್ರೆ ಧರ್ಮ ಯಾತ್ರೆ ನಡೆಯುತ್ತಿದೆ. ಇದಕ್ಕೆ ಜನ ಕೊಟ್ಟ ಶಕ್ತಿ ಕಾರಣ. ನಾವು ಜನರ ಋಣ ತೀರಿಸಿದ್ದೇವೆ. ಜನರೂ ಕೂಡ ಉಪಕಾರ ಸ್ಮರಣೆ ಇಟ್ಟುಕೊಳ್ಳುವ ವಿಶ್ವಾಸವಿದೆ” ಎಂದು ತಿಳಿಸಿದರು.

DK SHIVAKUMAR VISIT DHARMASTALA

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.