ಮಗು ಮಲಗಿದೆ, ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ರಮೇಶ್ ಹಾಗೂ ಅವರ ಪತ್ನಿ ಸಣ್ಣ ಮಗನೊಂದಿಗೆ ಬಳ್ಪದಲ್ಲಿ ವಾಸವಾಗಿದ್ದು, ಸಂಜೆ ಮನೆಯಲ್ಲಿರುವಾಗ ಅವರ ಸಂಬಂಧಿ ಸುಂದರ ಹೊಸ್ಮಠ ಅವರು ಮನೆಗೆ ಬಂದಿದ್ದು, ಕುಳಿತುಕೊಂಡು ಜೋರಾಗಿ ಮಾತನಾಡುತ್ತಿದ್ದರು. ಈ ವೇಳೆ ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ರಮೇಶ್ ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಸುಂದರ ಅವರು ಕತ್ತಿಯಿಂದ ರಮೇಶ್ ಅವರಿಗೆ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಾಯಗೊಂಡ ರಮೇಶ್ ಅವರು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಗು ಮಲಗಿದೆ, ಜೋರಾಗಿ ಮಾತಾಡ್ಬೇಡಿ ಎಂದದ್ದಕ್ಕೆ ಹಲ್ಲೆ"