ಮಗು ಮಲಗಿದೆ, ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ರಮೇಶ್ ಹಾಗೂ ಅವರ ಪತ್ನಿ ಸಣ್ಣ ಮಗನೊಂದಿಗೆ ಬಳ್ಪದಲ್ಲಿ ವಾಸವಾಗಿದ್ದು, ಸಂಜೆ ಮನೆಯಲ್ಲಿರುವಾಗ ಅವರ ಸಂಬಂಧಿ ಸುಂದರ ಹೊಸ್ಮಠ ಅವರು ಮನೆಗೆ ಬಂದಿದ್ದು, ಕುಳಿತುಕೊಂಡು ಜೋರಾಗಿ ಮಾತನಾಡುತ್ತಿದ್ದರು. ಈ ವೇಳೆ ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ರಮೇಶ್ ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಸುಂದರ ಅವರು ಕತ್ತಿಯಿಂದ ರಮೇಶ್ ಅವರಿಗೆ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಾಯಗೊಂಡ ರಮೇಶ್ ಅವರು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…