ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ ಸಾವಿನ ಹಿನ್ನೆಲೆ: ಸೂಕ್ತ ತನಿಖೆಗೆ ಒತ್ತಾಯಿಸಿದ ಪಕ್ಷ ನಾಯಕರು

ಪದ್ಮನಾಭ ಸಾಮಂತ

ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷರಾಗಿದ್ದ ವಾಮದಪದವು ನಿವಾಸಿ ಪದ್ಮನಾಭ ಸಾವಂತ ಭಾನುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರಕಿದ್ದು, ಇವರ ಸಾವಿನ ಹಿಂದೆ ಹಲವು ಸಂಶಯಗಳಿದ್ದು, ಸಾವಿಗೆ ಕಾರಣರಾದವರನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಒತ್ತಾಯಿಸಿದ್ದಾರೆ.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮಂತ್ ಅವರು ಸಾಮಾಜಿಕ ಜಾಲತಾಣ ಸಹಿತ ಹಲವು ವಿಧಗಳಲ್ಲಿ ಅಕ್ರಮಗಳನ್ನು ಬಯಲಿಗೆಳೆಯುವ ಕೆಲಸವನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ವಿರೋಧಿಗಳಿಂದ ಬೆದರಿಕೆ ಇತ್ತು. ಅವರ ಸಾವು ಸಂಶಯಾಸ್ಪದವಾಗಿದ್ದು, ಅದೊಂದು ಹತ್ಯೆ ಆಗಿರುವ ಸಂಶಯವಿದೆ ಎಂದವರು ಹೇಳಿದರು. 

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಸಾವಂತ್ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಿಲ್ಲಾ ಮಟ್ಟದ ಪ್ರತಿಭಟನೆಯನ್ನು ಕೈಗೊಳ್ಳಲಾಗುವುದು ಎಂದರು. ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್ ಮಾತನಾಡಿ ಪದ್ಮನಾಭ ಸಾಮಂತ್ ಓರ್ವ ನಿಷ್ಠಾವಂತ ಕಾರ್ಯಕರ್ತನಾಗಿದ್ದಾಗಿ ಹೇಳಿದರು. ಪ್ರಮುಖರಾದ ಪ್ರಶಾಂತ್ ಕುಲಾಲ್, ಸುರೇಶ್ ಪೂಜಾರಿ ಜೋರ, ಪ್ರವೀಣ್ ರೋಡ್ರಿಗಸ್, ಚಂದ್ರಹಾಸ ನಾಯ್ಕ್, ವೆಂಕಪ್ಪ ಪೂಜಾರಿ ಬಂಟ್ವಾಳ ಈ ಸಂದರ್ಭ ಉಪಸ್ಥಿತರಿದ್ದರು

ಘಟನೆಯ ವಿವರ ಹೀಗಿದೆ:

ಜಾಹೀರಾತು

ಪದ್ಮನಾಭ ಸೇವಂತ (34) ಎಂಬವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿತ್ತು. ಚೆನ್ನೈತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿಯಾಗಿರುವ ಇವರು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿದ್ದರು. ಭಾನುವಾರ ಬೆಳಗ್ಗೆ ಅವರ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು  ಈ ಕುರಿತು ಅವರ ಸಹೋದರ ನೀಡಿದ ದೂರಿನಂತೆ, ಪದ್ಮನಾಭ ಅವರು ಕ್ಯಾಟರಿಂಗ್‌ ಕೆಲಸ ಮಾಡಿಕೊಂಡಿದ್ದು, ಮನೆಗೆ 2-3 ದಿನಗಳಿಗೊಮ್ಮೆ ಬರುತ್ತಿದ್ದರು. ಮಾರ್ಚ್ 28ರಂದು ಪದ್ಮನಾಭ ಸಾವಂತ ಮನೆಯಲ್ಲಿರದೆ ಮೋಟಾರು ಸೈಕಲ್ ಮಾತ್ರ  ಮನೆಯಲ್ಲಿದ್ದು, ರಾತ್ರಿ ದೂರವಾಣಿ ಕರೆಮಾಡಿದಾಗ ಕರೆಯನ್ನು ಸ್ವೀಕರಿಸಿರಲಿಲ್ಲ. ಮಾರ್ಚ್ 31ರಂದು ಬೆಳಿಗ್ಗೆ ಮೃತದೇಹ ತೋಟದ ಹತ್ತಿರ ಇರುವ ಗುಡ್ಡ ಜಾಗದಲ್ಲಿ ನೇಣು ಬಿಗಿದುಕೊಂಡ ಸ್ಥೀತಿಯಲ್ಲಿ, ಅನುಮಾನಾಸ್ಪದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ, ಅನುಮಾನಾಸ್ಪದ ರೀತಿಯಲ್ಲಿ ನೇತಾಡುತ್ತಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ 174 (3)(vi)ಸಿಆರ್‌ಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ ಸಾವಿನ ಹಿನ್ನೆಲೆ: ಸೂಕ್ತ ತನಿಖೆಗೆ ಒತ್ತಾಯಿಸಿದ ಪಕ್ಷ ನಾಯಕರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*