ಬಂಟ್ವಾಳ

ಬಂಟ್ವಾಳದಲ್ಲಿ ಎಡಪಕ್ಷಗಳ ನೇತೃತ್ವದಲ್ಲಿ ರಾಜಕೀಯ ಸಮಾವೇಶ

ಬಿಜೆಪಿ ನೇತೃತ್ವದ ಎನ್‌ ಡಿ ಎ ಸರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರ “ಅಚ್ಚೇ ದಿನ್‌” ನಿಂದ “ಅಮೃತ ಕಾಲ” ದ ವರೆಗೆ ಒಂದು ದಶಕದಲ್ಲಿನ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ವಿಶ್ಲೇಷಣೆ ಮಾಡಿದರೆ ಬಿಜೆಪಿ ನೇತೃತ್ವದ ಸರಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ, ಡಾ.ಸಿದ್ಧನಗೌಡ ಪಾಟೀಲ್‌ ಅಭಿಪ್ರಾಯ ಪಟ್ಟರು.

ಜಾಹೀರಾತು

ಬಂಟ್ವಾಳದ ಬೈಪಾಸಿನಲ್ಲಿರುವ ಪಕ್ಷದ ಬಂಟ್ವಾಳ ತಾಲೂಕು ಕಚೇರಿಯ ಎ.ಶಾಂತಾರಾಮ ಪೈ ಸ್ವಾರಕ ಸಭಾ ಭವನದಲ್ಲಿ ಸಿಪಿಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಂವಿಂಧಾನ, ಪ್ರಜಾತಂತ್ರ, ಬಹುತ್ವ ಭಾರತ ಉಳಿಸಲು ಎಂಬ ಶೀರ್ಷೀಕೆಯಡಿಯಲ್ಲಿ   ನಡೆದ    ರಾಜಕೀಯ ಸಮಾವೇಶವನ್ನು ಉದ್ಘಾಟಿಸಿ  ಮಾತನಾಡುತ್ತಿದ್ದರು.

ಸಿಪಿಐ(ಎಂ) ಪಕ್ಷದ ದ.ಕ ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಮಾತನಾಡಿದರು. ಸಿಪಿಐನ ಕರ್ನಾಟಕ ರಾಜ್ಯ ಮಂಡಳಿ ಮುದ್ರಿಸಿದ “ಏತಕ್ಕಾಗಿ ಬಿಜೆಪಿಯನ್ನು  ಸೋಲಿಸಬೇಕು” ಎಂಬ 32 ಪುಟಗಳ ಕಿರುಹೊತ್ತಗೆ ಬಿಡುಗಡೆಯನ್ನು ಪಕ್ಷದ ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್‌ ಬಿಡುಗಡೆಗೊಳಿಸಿದರು. ಮಾಜಿ ಸಚಿವರಾದ ರಮಾನಾಥ ರೈ ಉಪಸ್ಥಿತರಿದ್ದು ಸಾಂಧರ್ಭೋಚಿತವಾಗಿ ಮಾತನಾಡಿದರು. ಸಭಾಧ್ಯಕ್ಷತೆಯ್ನು ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್‌ ವಹಿಸಿದ್ದರು.

ಜಾಹೀರಾತು

ವೇದಿಕೆಯಲ್ಲಿ ಎಐಟಿಯುಸಿ ಜಿಲ್ಲಾ ಅಧ್ಯಕ್ಷ  ಎಚ್.ವಿ.ರಾವ್‌, ಸಿಪಿಐ ಮಾಜಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್‌, ಬೂಡಾದ ಅಧ್ಯಕ್ಷರಾದ.ಬೇಬಿ ಕುಂದರ್‌, ಕಾಂಗ್ರೆಸ್‌ ಮುಖಂಡ ಸುದಿಪ್‌ ಕುಮಾರ್‌ ಶೆಟ್ಟಿ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಮೋಹನ್‌ ಶೆಟ್ಟಿ ಪಂಜಿಕಲ್ಲು, ಭಾರತೀಯ ಮಹಿಳಾ ಒಕ್ಕೂಟದ ನಾಯಕಿ ಭಾರತಿ ಪ್ರಶಾಂತ್‌ ಉಪಸ್ಥಿತರಿದ್ದರು. ಪಕ್ಷದ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್‌ ಕುಮಾರ್‌ ಬಂಟ್ವಾಳ್‌ ಸ್ವಾಗತಿಸಿ ನಿರೂಪಿಸಿದರು. ಪಕ್ಷದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಪ್ರೇಮನಾಥ ಕೆ. ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts