ಬಂಟ್ವಾಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ  ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಕುಕ್ಕಿಪಾಡಿ, ಇರ್ವತ್ತೂರು, ಬಡಗಕಜೆಕಾರು ಗ್ರಾಮ ಪಂಚಾಯತಿ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ನೈನಾಡು ಪರಿಸರದಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ ನಡೆಯಿತು.

ಜಾಹೀರಾತು

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬ್ಲೆ ಮಾತನಾಡಿ, ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವದ ಹಬ್ಬವಾದ ಮತದಾನದಂದು ಎಲ್ಲರೂ ಮತ ಚಲಾಯಿಸಬೇಕು ಎಂದು ಹೇಳಿದರು.

ಸ್ವೀಪ್ ತಾಲೂಕು ತರಬೇತುದಾರರಾದ ಸುರೇಖಾ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮತದಾನ ಜಾಗೃತಿ ನಡೆಸಲಾಯಿತು. ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಕಾಶ್, ಎನ್ನೆಆರ್ ಎಲ್ ಎಮ್ ತಾಲೂಕು ವ್ಯವಸ್ಥಾಪಕ ಪ್ರದೀಪ್ ಕಾಮತ್, ಸಂಗಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ರೋಹಿಣಿ, ಪಿಲಾತಬೆಟ್ಟು ಗ್ರಾಮ ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ ಬಾಲಕೃಷ್ಣ, ಇರ್ವತ್ತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾರಾಯಣ ನಾಯ್ಕ ಕೆ.,  ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಇತರರು ಭಾಗವಹಿಸಿದ್ದರು.

ಜಾಹೀರಾತು

ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*