ಬಂಟ್ವಾಳ

ಬಂಟ್ವಾಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ  ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಕುಕ್ಕಿಪಾಡಿ, ಇರ್ವತ್ತೂರು, ಬಡಗಕಜೆಕಾರು ಗ್ರಾಮ ಪಂಚಾಯತಿ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ನೈನಾಡು ಪರಿಸರದಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ ನಡೆಯಿತು.

ಜಾಹೀರಾತು

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬ್ಲೆ ಮಾತನಾಡಿ, ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವದ ಹಬ್ಬವಾದ ಮತದಾನದಂದು ಎಲ್ಲರೂ ಮತ ಚಲಾಯಿಸಬೇಕು ಎಂದು ಹೇಳಿದರು.

ಸ್ವೀಪ್ ತಾಲೂಕು ತರಬೇತುದಾರರಾದ ಸುರೇಖಾ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮತದಾನ ಜಾಗೃತಿ ನಡೆಸಲಾಯಿತು. ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಕಾಶ್, ಎನ್ನೆಆರ್ ಎಲ್ ಎಮ್ ತಾಲೂಕು ವ್ಯವಸ್ಥಾಪಕ ಪ್ರದೀಪ್ ಕಾಮತ್, ಸಂಗಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ರೋಹಿಣಿ, ಪಿಲಾತಬೆಟ್ಟು ಗ್ರಾಮ ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ ಬಾಲಕೃಷ್ಣ, ಇರ್ವತ್ತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾರಾಯಣ ನಾಯ್ಕ ಕೆ.,  ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಇತರರು ಭಾಗವಹಿಸಿದ್ದರು.

ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.