ಬಂಟ್ವಾಳ

ಬಂಟ್ವಾಳದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ

 

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ ನಡೆಯಿತು. ಆಟಿಸಂ ಮಕ್ಕಳ ತರಬೇತಿ ಹಾಗೂ ಅಭಿವೃದ್ಧಿಗಾಗಿ ಕೆಲಸಮಾಡುತ್ತಿರುವ ಬಿ.ಸಿ.ರೋಡಿನ ವಿಕಾಸಂ ಸೇವಾ ಫೌಂಡೇಶನ್ ಸಂಸ್ಥೆ ಹಾಗೂ ವಿಟ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಜಾಹೀರಾತು

ನೋಟರಿ ಮತ್ತು ನ್ಯಾಯವಾದಿ ಪಿ.ಜಯರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಟಿಸಂ ಮಕ್ಕಳು ಸಹಿತ ವಿಶೇಷ ಮಕ್ಕಳ ಸೇವೆಗೆ ವಿಶೇಷವಾದ ಕಾಳಜಿಯೂ ಬೇಕಾಗಿದ್ದು, ಇಂಥ ಪ್ರಕ್ರಿಯೆಗಳಿಂದ ಮಕ್ಕಳ ಹೆತ್ತವರಲ್ಲೂ ಆತ್ಮವಿಶ್ವಾಸ ಮೂಡಿಸುವ ಕಾರ್ಯ ನಡೆಯುತ್ತದೆ ಎಂದರು.

ಜಾಹೀರಾತು

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬಿಎಎಸ್ ಎಫ್ ಸಂಸ್ಥೆಯ ಡಿಜಿಎಂ ರಾಜಶೇಖರ ಭಟ್ ಕಾಕುಂಜೆ, ಸ್ವತಃ ಹೆತ್ತವರಾಗಿ ಮಗಳ ನ್ಯೂನತೆಯ ಸವಾಲನ್ನು ನಿಭಾಯಿಸಿದ ರೀತಿಯನ್ನು ವಿವರಿಸಿದರು. ಎನ್ನೆಸ್ಸೆಸ್ ಘಟಕ ಯೋಜನಾಧಿಕಾರಿ ಡಾ. ಜ್ಯೋತಿ ರೈ ಅತಿಥಿಗಳಾಗಿ ಶುಭ ಹಾರೈಸಿದರು.ವಿಕಾಸಂ ಸಂಸ್ಥೆಯ ಸಹಸಂಸ್ಥಾಪಕರಾದ ಧರ್ಮಪ್ರಸಾದ್ ರೈ  ಅಧ್ಯಕ್ಷತೆಯನ್ನು ವಹಿಸಿದರು. ವಿಕಾಸಂ ಸಂಸ್ಥೆಯ ಇನ್ನೋರ್ವ ಸಹಸಂಸ್ಥಾಪಕ ಗಣೇಶ್ ಭಟ್ ವಾರಣಾಸಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಗೆ ಆಟಿಸಂ ಸಮಸ್ಯೆಯ ಹಾಗೂ ನಿಭಾವಣೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಸಿಕೊಟ್ಟರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts