ಬಂಟ್ವಾಳ

ಹಿಂದೂ ಜನಜಾಗೃತಿ ಸಮಿತಿಯಿಂದ ವಿಶೇಷ ಅಭಿಯಾನ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಯುಗಾದಿ ಹಬ್ಬದ ನಿಮಿತ್ತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಉಜಿರೆ ಪುತ್ತೂರು, ಸುಳ್ಯ ಭಾಗಗಳಲ್ಲಿ ಬ್ರಹ್ಮಧ್ವಜದ ಸ್ಥಾಪನೆ ಹಾಗೂ ಶಾಸ್ತ್ರಾನುಸಾರ ಯುಗಾದಿ ಹಬ್ಬದ ಆಚರಣೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಮಾಡಿ ತೋರಿಸಲಾಯಿತು.

ಜಾಹೀರಾತು

ಯುಗಾದಿಯೆಂದರೆ ಹಿಂದುಗಳ ನವ ವರ್ಷ ಆರಂಭದ ದಿನ ಮತ್ತು ಸೃಷ್ಟಿಯ ಆರಂಭ ದಿನ. ಈ ದಿನದಂದು ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಅತ್ಯಧಿಕ ಪ್ರಮಾಣದಲ್ಲಿ ಬರುತ್ತವೆ. ಯುಗಾದಿ ಹಬ್ಬದಂದು ಬ್ರಹ್ಮಧ್ವಜವನ್ನು ಸ್ಥಾಪನೆ ಮಾಡುವುದು ಮುಖ್ಯ ಆಚರಣೆ ಆಗಿದೆ .ಈ ನಿಟ್ಟಿನಲ್ಲಿ ಈ ಪ್ರಾತ್ಯಕ್ಷಿಕೆ  ಮಾಡಿ ತೋರಿಸಲಾಯಿತು.

ದೊಡ್ಡ ಬಿದಿರಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಕಣವನ್ನು ಕಟ್ಟಿ ಅದರ ಮೇಲೆ ಸಕ್ಕರೆಯ ದಂಟು, ಬೇವಿನ ಚಿಗುರೆಲೆ, ಮಾವಿನ ಎಲೆ, ಕೆಂಪು ಹೂಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಸಿಂಗರಿಸಿ ಕೆಳಗಡೆ ಮಣೆಯ ಮೇಲೆ ರಂಗೋಲಿ ಬಿಡಿಸಿ ನಿಲ್ಲಿಸಬೇಕು. ಇದಕ್ಕೆ ‘ಬ್ರಹ್ಮ ಧ್ವಜಾಯ ನಮಃ ‘ಎಂದು ಹೇಳಿ ಸಂಕಲ್ಪಪೂರ್ವಕವಾಗಿ ಪೂಜೆ ಮಾಡಬೇಕು. ಬ್ರಹ್ಮದೇವನು ಈ ದಿನ ಸೃಷ್ಟಿಯನ್ನು ನಿರ್ಮಿಸಿದ ಕಾರಣ ಧರ್ಮಶಾಸ್ತ್ರದಲ್ಲಿ ಈ ದ್ವಜವನ್ನು ಬ್ರಹ್ಮ ಧ್ವಜ ಎಂದು ಕರೆಯಲಾಗಿದೆ. ಬ್ರಹ್ಮ ಧ್ವಜದಿಂದ  ವಾತಾವರಣದಲ್ಲಿನ ಪ್ರಜಾಪತಿ ಲಹರಿಗಳು ಕಲಶದಿಂದ ಮನೆಯಲ್ಲಿ ಪ್ರವೇಶಿಸುತ್ತವೆ. ಮರು ದಿನದಿಂದ ಈ ಕಳಶದಲ್ಲಿನ ನೀರು ಕುಡಿಯಲು ತೆಗೆದುಕೊಳ್ಳಬೇಕು. ಬ್ರಹ್ಮ ಧ್ವಜದ ಪೂಜೆಯಿಂದ ಪ್ರಜಾಪತಿ ಲಹರಿಗಳಿಂದ ಪೂಜಕನಿಗೆ ಮತ್ತು ಅವನ ಕುಟುಂಬದವರಿಗೆ ಲಾಭವಾಗುತ್ತದೆ.  ಹಿಂದೂಗಳು ಈ ಹಬ್ಬವನ್ನು ಒಟ್ಟಿಗೆ ಸೇರಿ ಆಚರಿಸಿದರೆ ಅದರಿಂದ ಹಿಂದೂ ಸಂಘಟನೆ ಮತ್ತು ಸಂಸ್ಕೃತಿಯ ರಕ್ಷಣೆಯಾಗುತ್ತದೆ. ಯಾವ ಭಾವದಿಂದ ಬ್ರಹ್ಮ ಧ್ವಜದ ಪೂಜೆಯನ್ನು ಮಾಡಲಾಗುತ್ತದೆಯೋ, ಅದೇ ಭಾವದಿಂದ ಬ್ರಹ್ಮಧ್ವಜವನ್ನು ಸೂರ್ಯಾಸ್ತದ ನಂತರ ತಕ್ಷಣ ಕೆಳಗೆ ಇಳಿಸಬೇಕು, ಬ್ರಹ್ಮಧ್ವಜಕ್ಕೆ ಹಾಕಿದ ಎಲ್ಲಾ ಸಾಹಿತ್ಯಗಳನ್ನು ದೈನಂದಿನದಲ್ಲಿ ಬಳಸುವ ವಸ್ತುಗಳ ಹತ್ತಿರ ಇಡಬೇಕು. ಬ್ರಹ್ಮಧ್ವಜಕ್ಕೆ ಅರ್ಪಿಸಿದ ಹೂಗಳು ಮತ್ತು ಮಾವಿನ ಎಲೆಗಳನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಬೇಕು. ಈ ರೀತಿಯಾಗಿ ನಾವು ಯುಗಾದಿ ಹಬ್ಬದಂದು ಬ್ರಹ್ಮಧ್ವಜವನ್ನು ಏರಿಸಿ ಶಾಸ್ತ್ರಾನುಸಾರ ವಾಗಿ ಆಚರಣೆ ಮಾಡಿದರೆ ನಮಗೆ ಯುಗಾದಿ ಹಬ್ಬದ ಸಂಪೂರ್ಣ ಲಾಭವು ದೊರಕುತ್ತದೆ ಎಂಬುದಾಗಿ ತಿಳಿಸಲಾಯಿತು. ಸುಮಾರು 300 ರ ಕ್ಕಿಂತಲೂ ಹೆಚ್ಚು ಮಂದಿ ಇದರ ಲಾಭ ಪಡೆದುಕೊಂಡರು ಎಂದು ಸಮನ್ವಯಕಾರ ವಿಜಯಕುಮಾರ್ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.