ಬಂಟ್ವಾಳ

ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆಯಾಗಿ ಪ್ರಮೀಳ ಮಾಣೂರು( ಸಾಯಿಪ್ರಿಯ) ಆಯ್ಕೆ

ಬಂಟ್ವಾಳ: ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆಯಾಗಿ ಪ್ರಮೀಳ ಮಾಣೂರು( ಸಾಯಿಪ್ರಿಯ) ಆಯ್ಕೆಯಾಗಿದ್ದಾರೆ. ಶ್ರೀ ಸಾಯಿ ಶಕ್ತಿ ಚಾರೀಟೇಬಲ್ ಟ್ರಸ್ಟ್ ಬೆಂಗಳೂರು ಮತ್ತು ಬಂಟ್ವಾಳದ ಸಂಸ್ಥಾಪಕಿಯಾಗಿರುವ  ಇವರು ಹಲವಾರು ಜಾನಪದ,  ಸಾಹಿತ್ಯ ಮತ್ತು ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಮೇಶ್ ಮೆಲ್ಕಾರ್ ಪ್ರಧಾನ ಕಾರ್ಯದರ್ಶಿ, ಬಬಿತ ಎಸ್.ಎಮ್. ಕೋಶಾಧಿಕಾರಿ, ಲಕ್ಷ್ಮೀ ಯಶವಂತ ಶೆಟ್ಟಿ ತುಂಬೆ ಜತೆ ಕಾರ್ಯದರ್ಶಿ, ಪ್ರತಿಭಾ ಪಿ.ಶೆಟ್ಟಿ ಮತ್ತು ಕೃಷ್ಣ ಕುಲಾಲ್ ನರಿಕೊಂಬು ಉಪಾಧ್ಯಕ್ಷರು, ಸದಾಶಿವ ಡಿ.ತುಂಬೆ, ರೋಶನ್ ರೈ, ಸುಧಾಕರ ತುಂಬೆ, ಅನಿಲ್ ಪಂಡಿತ್, ಗೋಪಾಲ ಅಂಚನ್ ಗೌರವ ಸಲಹೆಗಾರರು, ಮನೋಜ್ ಕನಪಾಡಿ ಮತ್ತು ಪ್ರಶಾಂತ್ ಕನಪಾಡಿ ಸಂಚಾಲಕರು, ಚಂದ್ರಹಾಸ ಕಡೆಗೋಳಿ, ರಾಜೇಶ್ ಆಚಾರ್ಯ, ದಿನೇಶ್ ಅಮೀನ್ ಸಂಘಟನಾ ಕಾರ್ಯದರ್ಶಿಗಳು, ಎಚ್ಕೆ.ನಯನಾಡು, ದಿನೇಶ್ ಶೆಟ್ಟಿ ಕೊಟ್ಟಿಂಜ, ಪ್ರಸಾದ್ ಬಂಟ್ವಾಳ ಸಾಂಸ್ಕ್ರತಿಕ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಏಪ್ರಿಲ್ 7ರಂದು ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ.

ಜಾಹೀರಾತು

ಅಪರಾಹ್ನ 3 ಗಂಟೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ‌ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ ಪ್ರಜ್ವಲಿಸುವರು. ಉದ್ಯಮಿ ರಘುನಾಥ ಸೋಮಯಾಜಿ ಉದ್ಘಾಟಿಸುವರು. ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ತಾರಾನಾಥ ಶೆಟ್ಟಿ ಬೋಳಾರ, ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅತಿಥಿಗಳಾಗಿ ಭಾಗವಹಿಸುವರು ಎಂದು ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಾಣೂರು( ಸಾಯಿಪ್ರಿಯ) ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಮೆಲ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

(ADVT)

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

12 hours ago