ಮತದಾನ ಜಾಗೃತಿ: ಪೇಟೆಯಾದ್ಯಂತ ಸಾಗಿ ಮಹತ್ವ ಸಾರಿದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು

ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ಆಶ್ರಯದಲ್ಲಿ ತಾಲೂಕಿನ ವಿವಿಧೆಡೆ ಪುನರ್ವಸತಿ ಕಾರ್ಯಕರ್ತರಾಗಿ ಕೆಲಸ ಮಾಡುವ ಸುಮಾರು 62 ಮಂದಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಬಂಟ್ವಾಳ ತಾಲೂಕು ಕಚೇರಿಯಿಂದ ಹೊರಟ ಜಾಗೃತಿ ಜಾಥಾ ಬಿ.ಸಿರೋಡ್ ಪೇಟೆಯ ಮೂಲಕ ಸಾಗಿ ಬಂಟ್ವಾಳ ತಾಲೂಕು ಪಂಚಾಯತ್ ವಠಾರದಲ್ಲಿ ಸಮಾಪನಗೊಂಡಿತು. ಸಮಾಪನ ಕಾರ್ಯಕ್ರದಲ್ಲಿ ನಿಷ್ಪಕ್ಷಪಾತ ಮತದಾನ ಹಾಗೂ ಯಾವುದೇ ಆಮಿಷಗಳಿಗೆ ಬಲಿಯಾಗದೇ ಸ್ವತಂತ್ರವಾಗಿ ನೀವು ಹಾಗೂ ನಿಮ್ಮ ಮನೆಯವರೆಲ್ಲವರು ಮತದಾನ ಮಾಡುವಂತೆ ಬಂಟ್ವಾಳ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ . ಕಾಂಬಳೆ ತಿಳಿಸಿದರು. ಸಹಾಯಕ ನಿರ್ದೇಶಕರಾದ ವಿಶ್ವನಾಥ ಬಿ., ಹಾಗೂ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು ಉಪಸ್ಥಿತರಿದ್ದರು. ಸ್ವೀಪ್ ಸಮಿತಿಯ ತಾಲೂಕು ನೋಡಲ್ ಸುರೇಖಾ ಯಾಳವಾರ ಮಾಹಿತಿ ನೀಡಿ, ಪ್ರಮಾಣ ವಚನ ಬೋಧಿಸಿ, ನಿರೂಪಣೆ ಮಾಡಿದರು. ತಾಲೂಕು ಪಂಚಾಯಿತಿ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ಸಿಬ್ಬಂದಿ ಪ್ರಕಾಶ್, ಅಶೋಕ್, ಐಇಸಿ ಸಂಯೋಜಕ ರಾಜೇಶ್, ಸ್ವೀಪ್ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಪಾತೂರು, ಪ್ರಶಾಂತ್, ಅಶೋಕ್ ಕುಮಾರ್, ರಾಜೇಶ್ ಉಪಸ್ಥಿತರಿದ್ದರು. ವಿಶೇಷಚೇತನರ ಪುನರ್ವಸತಿ ಕಾರ್ಯಕರ್ತರಾದ ಗಿರೀಶ್, ಜಗದೀಶ್, ದೀಪಾ ಪಡಿಯಾರ್ ಸಹಕರಿಸಿದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮತದಾನ ಜಾಗೃತಿ: ಪೇಟೆಯಾದ್ಯಂತ ಸಾಗಿ ಮಹತ್ವ ಸಾರಿದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*