ಬಂಟ್ವಾಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುದುವೆಟ್ಟು ಗ್ರಾಮದ ವಿದ್ಯಾರ್ಥಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ. ಪುದುವೆಟ್ಟು ಗ್ರಾಮದ ಮಿಯ್ಯಾರು ಮಠ ನಿವಾಸಿ ಜೋಸೆಫ್ ಸನ್ನಿ ಕಂಡತ್ತಿಂಕರ ಅವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂ.ಬಿ.ಎ ಓದುತ್ತಿದ್ದ ಶಾರೋನ್ ಕಂಡತ್ತಿಂಕರ (21) ಸಾವನ್ನಪ್ಪಿದವರು.
ಜಾಹೀರಾತು
ಏ.5ರಂದು ಮುಂಜಾನೆ ಶರೋನ್ ಹಾಗೂ ಕಳೆಂಜ ಗ್ರಾಮದ ಮಾಣಿಂಗೇರಿ ನಿವಾಸಿ ನಸಿಂಗ್ ವಿದ್ಯಾರ್ಥಿ ಸೆಬಾಸ್ಟಿಯನ್ ಮಂಗಳೂರಿನತ್ತ ಸಾಗುತ್ತಿದ್ದ ಬೈಕ್ ಬಿ.ಸಿ.ರೋಡ್ ಬಳಿ ಕೈಕಂಬದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಮಸೀದಿಗೆ ಹೋಗುತ್ತಿದ್ದ ಸ್ಥಳೀಯರು ಗಮನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದರು. ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಪುದುವೆಟ್ಟಿನ ವಿದ್ಯಾರ್ಥಿ ಸಾವು"