ರಾಜಕೀಯ ಲಾಭಕ್ಕಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋವನ್ನು ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಬಂಟ್ವಾಳದಲ್ಲಿ ಬಿಲ್ಲವ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಜಗದೀಶ ಕೊಯ್ಲ, ಬ್ರಹ್ಮಶ್ರೀ ನಾರಾಯಣಗುರುಗಳ ಟ್ಯಾಬ್ಲೊವನ್ನು ಪ್ರದರ್ಶನ ಮಾಡದಂತೆ ಮಾಡಿದವರು, ಇದೀಗ ರಾಜಕೀಯ ಲಾಭಕ್ಕಾಗಿ ಫೊಟೋವನ್ನು ಬಳಕೆ ಮಾಡುತ್ತಿದ್ದಾರೆ ಎಂದರು.
ಬಿಲ್ಲವ ಸಮಾಜಕ್ಕೆ ಅವಮಾನ, ನಾರಾಯಣ ಗುರುಗಳ ವಿಚಾರಗಳಿಗೆ ಅವಮಾನ ಮಾಡುವ ವ್ಯಕ್ತಿಗಳಿಗೆ ಲೋಕಸಭಾ ಚುನಾವಣೆಯ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರುಗಳ ನೆನಪಾಗಿದೆ ಎಂದು ವ್ಯಂಗವಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂಜೀವ ಪೂಜಾರಿ ಬಿರ್ವ, ಹರೀಶ್ ಪೂಜಾರಿ, ಬಿ. ವಾಸು ಪೂಜಾರಿ, ಪ್ರೇಮನಾಥ್, ಮಾಯಿಲಪ್ಪ ಸಾಲಿಯಾನ್, ತಿಲಕ್ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ರಾಜಕೀಯ ಲಾಭಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋ ಬಳಕೆ: ಬಿಲ್ಲವ ಮುಖಂಡರ ಆಕ್ಷೇಪ"