ರಾಜಕೀಯ ಲಾಭಕ್ಕಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋವನ್ನು ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಬಂಟ್ವಾಳದಲ್ಲಿ ಬಿಲ್ಲವ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಜಗದೀಶ ಕೊಯ್ಲ, ಬ್ರಹ್ಮಶ್ರೀ ನಾರಾಯಣಗುರುಗಳ ಟ್ಯಾಬ್ಲೊವನ್ನು ಪ್ರದರ್ಶನ ಮಾಡದಂತೆ ಮಾಡಿದವರು, ಇದೀಗ ರಾಜಕೀಯ ಲಾಭಕ್ಕಾಗಿ ಫೊಟೋವನ್ನು ಬಳಕೆ ಮಾಡುತ್ತಿದ್ದಾರೆ ಎಂದರು.
ಬಿಲ್ಲವ ಸಮಾಜಕ್ಕೆ ಅವಮಾನ, ನಾರಾಯಣ ಗುರುಗಳ ವಿಚಾರಗಳಿಗೆ ಅವಮಾನ ಮಾಡುವ ವ್ಯಕ್ತಿಗಳಿಗೆ ಲೋಕಸಭಾ ಚುನಾವಣೆಯ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರುಗಳ ನೆನಪಾಗಿದೆ ಎಂದು ವ್ಯಂಗವಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂಜೀವ ಪೂಜಾರಿ ಬಿರ್ವ, ಹರೀಶ್ ಪೂಜಾರಿ, ಬಿ. ವಾಸು ಪೂಜಾರಿ, ಪ್ರೇಮನಾಥ್, ಮಾಯಿಲಪ್ಪ ಸಾಲಿಯಾನ್, ತಿಲಕ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…