ಪ್ರಮುಖ ಸುದ್ದಿಗಳು

ಮಂಗಳೂರಲ್ಲಿ ಪ್ರಧಾನಿ ಮೋದಿ ಹವಾ ಹೇಗಿತ್ತು? ಚಿತ್ರಗಳು ಇಲ್ಲಿವೆ

ಜಾಹೀರಾತು

ಜಾಹೀರಾತು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಉಡುಪಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಡಲನಗರಿ ಮಂಗಳೂರಲ್ಲಿ ಭಾನುವಾರ ರೋಡ್ ಶೋ ನಡೆಸಿದರು.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದರು
. ತೆರೆದ ವಾಹನದಲ್ಲಿ ಮೋದಿ ಅವರು ಅಭ್ಯರ್ಥಿ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಜೊತೆ ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು
. ರಸ್ತೆಯ ಇಕ್ಕೆಲೆಗಳಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು, ಸಾರ್ವಜನಿಕರು ಸೇರಿದ್ದರು.
ಜನರು ಹರ್ಷೋದ್ಘಾರ ನಡುವೆ ಹೂವಿನ ಪಕಳವನ್ನು ಪ್ರಧಾನಿಯತ್ತ ಚೆಲ್ಲಿ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಿ ಜನಸಮೂಹದತ್ತ ಕೈಬೀಸುತ್ತಲೇ ಸಾಗಿದರು. ನವಭಾರತ ಸರ್ಕಲ್ ಬಳಿ ರೋಡ್ ಶೋ ಸಮಾಪ್ತಿಗೊಂಡಿತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ