ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಜಿ ಶಾಸಕ ಯೋಗೀಶ್ ಭಟ್ ಅವರ ಬಳಿ ಹೇಳಿದ್ದೇನು?

 

ಜಾಹೀರಾತು

ಪ್ರಧಾನಿ ಮೋದಿಯವರು ಮಂಗಳೂರು ನಗರದಲ್ಲಿ ಇದೇ ಮೊದಲ ಬಾರಿಗೆ ರೋಡ್ ಶೋ ನಡೆಸಿದ್ದು, ಅವರ ಮಂಗಳೂರು ಭೇಟಿ ಇದು ಹತ್ತನೇ ಬಾರಿಯದ್ದು.

ಈ ಹಿಂದೆಲ್ಲಾ ಬೃಹತ್ ಸಭೆಗಳನ್ನು ಉದ್ದೇಶಿ ಮಾತನಾಡಿ ತೆರಳುತ್ತಿದ್ದ ಮೋದಿ ಈ ಬಾರಿ ಅಭಿಮಾನಿಗಳಿಗೆ ಕೈಬೀಸುತ್ತಲೇ ರೋಡ್ ಶೋ ನಡೆಸಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆಗೈದ ಮೋದಿಯವರನ್ನು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕಡೆಗೋಲು ಹಿಡಿದ ಉಡುಪಿ ಕೃಷ್ಣನ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.  ಅಲ್ಲಿಂದಲೇ ಮೋದಿಯವರು ವಾಹನ ಏರಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಿದ್ದ ಮಾಜಿ ಶಾಸಕ ಯೋಗೀಶ್ ಭಟ್ ಅವರನ್ನು ಕಂಡು ಮೋದಿಯವರು, ಕೈಸಾ ಹೋ ಭಟ್ ಜೀ ಅಂತ ಹೇಳಿ ಹತ್ತಿರ ಬಂದಿದ್ದಾರೆ. ಯೋಗೀಶ್ ಭಟ್ ಅವರ ಕಣ್ಣು ಮಂಜಾಗಿರುವುದನ್ನು ತಿಳಿದು ಕಣ್ಣಿನ ಸಮಸ್ಯೆಯೇನು ಎಂದು ಕೇಳಿದ್ದಾರೆ. ಯೋಗೀಶ್ ಭಟ್ ಅವರು ತಮ್ಮ ಕಣ್ಣಿಗೆ ಸಮಸ್ಯೆ ಆಗಿರುವುದನ್ನು ಮೋದಿ ಬಳಿ ಹೇಳಿಕೊಂಡಿದ್ದಾರೆ. ಮೋದಿ ಅವರಿಗೆ ಗುಜರಾತ್ ಮುಖ್ಯಮಂತ್ರಿ ಆಗೋದಕ್ಕೂ ಮೊದಲೇ ಯೋಗೀಶ್ ಭಟ್ ಅವರ ಪರಿಚಯ ಇತ್ತು.

ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಎಂಪೈರ್ ಮಾಲ್ ಬಳಿ ಜನರ ನಡುವೆ ಕಲಾವಿದರೊಬ್ಬರು ಕೈಯಲ್ಲಿ ಬಿಡಿಸಿದ ಮೋದಿಯ ತೈಲ ಚಿತ್ರವನ್ನು ತೋರಿಸಿದ್ದಾರೆ. ತೊಕ್ಕೊಟ್ಟಿನ ಪಿಲಾರ್ ನಿವಾಸಿ ಚಿತ್ರ ಕಲಾವಿದ ಕಿರಣ್ ಮೋದಿಯವರ ತೈಲ ಚಿತ್ರ ಬಿಡಿಸಿ ತಂದಿದ್ದರು. ಅದನ್ನು ನೋಡಿದ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಚಿತ್ರವನ್ನು ಎಸ್ ಪಿಜಿ ಮೂಲಕ ಪಡೆದುಕೊಳ್ಳಲು ಸೂಚಿಸಿದ್ದಾರೆ. ಎಸ್ ಪಿಜಿ ಭದ್ರತಾ ಸಿಬಂದಿ ತೈಲ ಚಿತ್ರವನ್ನು ಪಡೆದುಕೊಂಡಿರುವ ವಿಡಿಯೋ ವೈರಲ್ ಆಗಿದೆ.

ಎರಡು ವರ್ಷಗಳ ಹಿಂದೆ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ತಾಯಿ ರತ್ನಾವತಿ ಬಳಿ ನಿಂತು ಕೈಮುಗಿದು ನಮಸ್ಕರಿಸಿ ಮೋದಿ ಮುಂದೆ ಸಾಗಿದ್ದು ಕಂಡುಬಂತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಜಿ ಶಾಸಕ ಯೋಗೀಶ್ ಭಟ್ ಅವರ ಬಳಿ ಹೇಳಿದ್ದೇನು?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*