ಬಂಟ್ವಾಳ

ಕಳ್ಳಿಗೆ ಗ್ರಾಮದಲ್ಲಿ ಬ್ರಿಜೇಶ್ ಚೌಟ ಪರವಾಗಿ ಶಾಸಕ ರಾಜೇಶ್ ನಾಯ್ಕ್ ಪ್ರಚಾರ ಅಭಿಯಾನ

ಜಾಹೀರಾತು

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ ಎಂಬ ನೂತನ ಕಾರ್ಯಕ್ರಮ ಆಯೋಜಿಸಿದ್ದು, ಬಂಟ್ವಾಳದ ಹಲವೆಡೆ ಭೇಟಿ ನೀಡಿದ್ದಾರೆ.

ಕಳ್ಳಿಗೆ ಗ್ರಾಮದ ಬೆಂಜನಪದವು ,ದರಿಬಾಗಿಲು, ಚಂದ್ರಿಗೆ,ಗಾಂದೋಡಿ ಮತದಾರರ ಮನೆಗೆ ಬೇಟಿ ನೀಡಿ ಮತಯಾಚನೆ ನಡೆಸಿದರು. ಲೋಕಸಭಾ ಅಭ್ಯರ್ಥಿಯ ಪರಿಚಯ ಪತ್ರ,ಹಾಗೂ ಮೋದಿ ಸರಕಾರದ ಅವಧಿಯಲ್ಲಿ ನಡೆಸಲಾದ ಯೋಜನೆಗಳ ಮಾಹಿತಿ ಕರಪತ್ರವನ್ನು ಮತದಾರರಿಗೆ ಶಾಸಕ ರಾಜೇಶ್ ,ಮಾಜಿ ಶಾಸಕ ಎ‌.ರುಕ್ಮಯ ಪೂಜಾರಿ ಹಾಗೂ ಜಿ‌ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಜೊತೆಯಾಗಿ ನೀಡಿದರು.

ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಸದಸ್ಯರಾದ ದಾಮೋದರ ನೆತ್ತರಕೆರೆ, ರೇಶ್ಮಾ,ಮನೋಜ್ ಕಳ್ಳಿಗೆ ಪ್ರಮುಖರಾದ ದಿನೇಶ್ ಶೆಟ್ಟಿ ದಂಬೆದಾರ್, ಯೋಗೀಶ್ ದರಿಬಾಗಿಲು, ಅಖೇಶ್ ಬೆಂಜನಪದವು ಅಭಿನ್ ರೈ, ಪ್ರವೀಣ್ ಬೆಂಜನಪದವು, ಶಾರದ ಕೋಟೇಶ್,ವಸಂತಿ ಮನೋಹರ್, ಸುಗಂದಿ ಕಮಲಾಕ್ಷ, ನಮಿತಾಸುರೇಶ್, ಕಾರ್ತಿಕ್ ಬೆಂಜನಪದವು,ಪ್ರದೀಪ್ ಬೆಂಜನಪದವು,ಸಾತ್ವಿಕ್, ಯಶೋಧರ,ಕೇಶವ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.