ಬಂಟ್ವಾಳ

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಜಾಹೀರಾತು

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಇದೇ 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದ್ದಾರೆ.

ಜಾಹೀರಾತು

 ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸುಮಾರು 108 ವರ್ಷಗಳ ಹಿಂದೆ  ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಸಂಘಟನೆ ಮತ್ತು ಆರೋಗ್ಯವಂತ ಬಲಿಷ್ಟ ಯುವಕರನ್ನು ಸಜ್ಜುಗೊಳಿಸಲು ಸ್ಥಳೀಯರು ‘ಗೋದ ಶಾಲೆ’ ಆರಂಭಿಸಿ ಬಳಿಕ ನವಜೀವನ ವ್ಯಾಯಾಮ ಶಾಲೆಯಾಗಿ ರೂಪುಗೊಂಡಿದೆ’ ಎಂದರು. ಕಳೆದ 6 ವರ್ಷಗಳ ಹಿಂದೆ ನೂತನ ವ್ಯಾಯಾಮ ಶಾಲೆ ಮತ್ತು ಧ್ಯಾನಮಂದಿರ ಸಹಿತ ಹನುಮಾನ್ ಮಂದಿರ ನಿಮರ್ಾಣ ಕಾಮಗಾರಿ ಆರಂಭಗೊಂಡಿದ್ದು, ದಾನಿಗಳ ನೆರವು ಮತ್ತು ಸ್ಥಳೀಯರ ಶ್ರಮದಾನದಿಂದ ಕಾಮಗಾರಿ ಪೂರ್ಣಗೊಂಡಿದೆ. ಕಳೆದ 45 ವರ್ಷಗಳಿಂದ ಇದೇ ಸಭಾಂಗಣ ಬಳಿ ಸಾರ್ವಜನಿಕ ಶ್ರೀ ಗಣೇಶೋತ್ಸವವೂ ನಡೆಯುತ್ತಿದೆ ಎಂದು ನವಜೀವನ ವಾಯಾಮ ಶಾಲೆ ಅಧ್ಯಕ್ಷ ಶರತ್ ಎಚ್. ತಿಳಿಸಿದರು.

ಹೊರೆಕಾಣಿಕೆ: ಇದೇ 20ರಂದು ಸಂಜೆ 4 ಗಂಟೆಗೆ ಮೊಗನರ್ಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಬಳಿ ಹೊರಡುವ ಆಕರ್ಷಕ ಹೊರೆಕಾಣಿಕೆ ಮೆರವಣಿಗೆಗೆ ದೇವಳದ ಮೊಕ್ತೇಸರ ಜನಾರ್ದನ ಭಟ್ ಚಾಲನೆ ನೀಡಲಿದ್ದು, ಒಟ್ಟು 24 ದಿನಗಳಲ್ಲಿ ನಿತ್ಯ ಭಜನೆ ಸಂಕೀರ್ತನೆ ನಡೆಯುತ್ತಿದೆ ಎಂದು ಸಮಿತಿ ಸದಸ್ಯ ಬಾಲಕೃಷ್ಣ ಮಾಸ್ತರ್ ಹೇಳಿದರು. 

ಇದೇ 21ರಿಂದ 23ರತನಕ ವಿವಿಧ ಧಾರ್ಮಿಕ ಮತ್ತು ವೈದಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನ ವಿವೇಕ ಚೈತನ್ಯಾನಂದ ಸ್ವಾಮೀಜಿ, ಒಡಿಯೂರು ಸಂಸ್ಥಾನ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ, ಕನ್ಯಾಡಿ ಶ್ರೀರಾಮ ಕ್ಷೇತ್ರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು. 

ಜಾಹೀರಾತು

ಇದೇ 23ರಂದು ‘ಹನುಮ ಜಯಂತಿ’ ನಡೆಯಲಿದ್ದು, ಪ್ರತಿದಿನ ಮದ್ಯಾಹ್ನ ಮತ್ತು ರಾತ್ರಿ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಸಮಿತಿ ಅಧ್ಯಕ್ಷೆ ಹೇಮಲತಾ ಸಾಲಿಯಾನ್, ಪ್ರಮುಖರಾದ ಉಮೇಶ ನೆಲ್ಲಿಗುಡ್ಡೆ, ನರ್ಸಪ್ಪ ಅಮೀನ್, ಗಣೇಶ ಕುಲಾಲ್, ಅಶೋಕ್ ಮಂಜೇಶ್ವರ, ವೇದವ ಗಾಣಿಗ, ಆಶಾ ವೇದವ, ಪ್ರಜ್ವಲ್, ಪ್ರಕಾಶ್, ನವೀನ್ ಬೋಳಂತೂರು ಉಪಸ್ಥಿತದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ