ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ಗತವೈಭವ ಮರುಕಳಿಸುವುದು ನಿಶ್ಚಯ: ತೊಕ್ಕೊಟ್ಟು ಸಹಿತ ಹಲವೆಡೆ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅಭಿಮತ

ಉಳ್ಳಾಲ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವವನ್ನು ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ಗತವೈಭವ ಮರುಕಳಿಸುವುದು ನಿಶ್ಚಯ: ತೊಕ್ಕೊಟ್ಟು ಸಹಿತ ಹಲವೆಡೆ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅಭಿಮತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*