ಬಂಟ್ವಾಳ

ಬಂಟ್ವಾಳದಲ್ಲಿ  ಕುಲಾಲ ಮತ್ತು ವಿಶ್ವಕರ್ಮ ಸಮಾಜ ಪ್ರಮುಖರೊಂದಿಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಂವಾದ

ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು  ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡ ವೇಳೆ ಕುಲಾಲ ಸಮುದಾಯ ಹಾಗೂ ವಿಶ್ವಕರ್ಮ ಸಮಾಜದ ಪ್ರಮುಖರ ಜೊತೆ ಸಂವಾದ ನಡೆಸಿದರು.ಬಳಿಕ ಕಾರ್ಯಕರ್ತರ ಜೊತೆ  ಮಾತನಾಡಿದ ಅವರು ರಾಷ್ಟ್ರೀಯತೆ ಮತ್ತು ಹಿಂದೂ ವಿಚಾರಧಾರೆಗಳಿಗೆ  ಗೌರವ ತರುವುದರ ಜೊತೆಗೆ ಪ್ರಮಾಣಿಕವಾಗಿ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಎಲ್ಲಾ ಸಮಾಜದ ಮೇಲೆ ಪರಿಣಾಮ ಬೀರುವ ಭವಿಷ್ಯದ ಚುನಾವಣೆ ಇದಾಗಿದ್ದು, ಕಳೆದ 10 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಾಕಿಕೊಂಡಿರುವ ಯೋಜನೆಗಳಿಗೆ ಈ ವರ್ಷದ ಲೋಕಸಭಾ ಚುನಾವಣೆ ಶಕ್ತಿ ನೀಡುವಂತಹ ಚುನಾವಣೆಯಾಗಿದೆ ಎಂದು ತಿಳಿಸಿದರು.

ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಜಗದೀಶ್ ಶೇಣವ, ಪೂಜಾ ಪೈ, ,ಗ್ರಾ.ಪಂ.ಉಪಾಧ್ಯಕ್ಷ ಚಂದ್ರಹಾಸ ಪೂಜಾರಿ,ಸದಸ್ಯರಾದ ಮಮತಾ ಪೂಜಾರಿ, ಉಮೇಶ್ ಶೆಟ್ಟಿ,ಗೀತಾ, ರಘವೀರ ಆಚಾರ್ಯ, ಪ್ರಕಾಶ್ ಆಳ್ವ, ಪ್ರಮುಖರಾದ ದೇವಪ್ಪ ಪೂಜಾರಿ, ನಂದರಾಮ ರೈ, ರಮೇಶ್ ಭಟ್ಟಾಜೆ,, ಮೋಹನ್ ದಾಸ್ ಕೊಟ್ಟರಿ,  ಸಂದೇಶ್ ಶೆಟ್ಟಿ ಅರೆಬೆಟ್ಟು, ಹರಿಪ್ರಸಾದ್ ಕುಲಾಲ್ , ರಾಧಾಕೃಷ್ಣ ಕುಲಾಲ್, ಮಚ್ಚೇಂದ್ರ ಸಾಲಿಯಾನ್, ಮನೋಜ್ ಆಚಾರ್ಯ, ಡೊಂಬಯ್ಯ ಅರಳ, ಜನಾರ್ದನ ಬೊಂಡಾಲ, ಸುರೇಶ್ ಕೊಟ್ಯಾನ್, ಚಂದ್ರಹಾಸ ಪೂಜಾರಿ,ತಿರುಲೇಶ್, ತಿರುಮಲೇಶ್,ತಿಮ್ಮಪ್ಪ ವಿಶ್ವಂಭರ, ಮೋಹನ್ ಮೇಲಾಂಟ, ತಿಮ್ಮಪ್ಪ ರೈ, ಸವಿತಾ ಶೆಟ್ಟಿ, ನಿರಂಜನ ಸೇಮಿತ, ಬಾಲಕೃಷ್ಣ ಶೆಟ್ಟಿ,ಜಯಂತ ತಂಬಡಗುಡ್ಡೆ  ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.